ಓದಿನಲ್ಲಿ ಕ್ಷಮತೆಯನ್ನು ತೋರಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ:ಡಾ.ಶುಭಕರ ಆಚಾರ್ಯ

ಓದಿನಲ್ಲಿ ಕ್ಷಮತೆಯನ್ನು ತೋರಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಹೆಮ್ಮಾಡಿ:ತಮ್ಮೊಳಗೆ ಅಡಗಿರುವ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರ್ಪಡಿಸುವುದೆ ಶಿಕ್ಷಣವಾಗಿದೆ ವಿದ್ಯಾರ್ಥಿಗಳು ಓದಿನಲ್ಲಿ ಸರಿಯಾದ ರೀತಿಯ ಕ್ಷಮತೆಯನ್ನು ತೋರಿಸಿದಾಗ ಮಾತ್ರ ಅಪೂರ್ವವಾದ ಸಾಧನೆಯನ್ನು ಮಾಡಲು ಸಾಧ್ಯವಿದೆ.ಜಗತ್ತನ್ನು ಬದಲಿಸುವ ಶಕ್ತಿ ಶಿಕ್ಷಣಕ್ಕೆ ಇದೆ ಎಂದು ಭಂಡಾರ್‍ಕಾರ್ಸ್ ಕಾಲೇಜಿನ ಪ್ರಿನ್ಸಿಪಾಲ್ ಡಾ.ಶುಭಕರ ಆಚಾರ್ಯ ಅಭಿಪ್ರಾಯಪಟ್ಟರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಜನತಾ ಸಂಭ್ರಮ 2ಕೆ23 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

ಹೆಮ್ಮಾಡಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಬೈಂದೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತವಾದ ಸಾಧನೆಯನ್ನು ಮಾಡಿದ್ದಾರೆ.ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಇಂಪಾ ಪ್ರಥಮ ಸ್ಥಾನ […]

ಜನತಾ ಹೆಮ್ಮಾಡಿ:ಕೌಶಲ್ ಆಚಾರ್ಯ ರಾಷ್ಟ್ರೀಯ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ

ಜನತಾ ಹೆಮ್ಮಾಡಿ:ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ ನವದೆಹಲಿಯಲ್ಲಿ ನ.15 ರಂದು ನಡೆಯಲಿರುವ ಪ್ರಥಮ ಹೊರನಾಡು ಮಕ್ಕಳ ಸಾಹಿತ್ಯ ಸಮ್ಮೇಳದ ಕವಿಗೋಷ್ಠಿ ವಿಭಾಗಕ್ಕೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವೀಭಾಗದ ವಿದ್ಯಾರ್ಥಿ ಕೌಶಲ್ ಆರ್ ಆಚಾರ್ಯ ಆಯ್ಕೆಯಾಗಿದ್ದಾರೆ.ಉಡುಪಿ ಜಿಲ್ಲೆಯಿಂದ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿ.ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ,ಬೊಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

You cannot copy content of this page