ಗರಿಷ್ಠ ಪ್ರಮಾಣದಲ್ಲಿ ಪರಿಹಾರ ನೀಡಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾಪುರ:ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗರಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಸರಕಾರ ಮೀನುಗಾರ ಕುಟುಂಬದವರ ಬೆನ್ನಿಗೆ ನಿಲ್ಲಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸವನ್ನು ವ್ಯಕ್ತಪಡಿಸಿದರು.ಕುಂದಾಪುರ ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಸ್ಥಳ ಪರಿಶೀಲನೆ ನಡೆಸಿ ಮೀನುಗಾರರೊಂದಿಗೆ ಜತೆ ಮಾತನಾಡಿದರು.ಈಗಾಗಲೇ ಸಂಬಂಧಿಸಿದ ಮಂತ್ರಿಗಳು,ಪಕ್ಷದ ನಾಯಕರುಗಳು,ಅಧಿಕಾರಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾದ ವರದಿಯನ್ನು ಸರಕಾರಕ್ಕೆ ನೀಡಿದ್ದಾರೆ.ಮತ್ತೊಮ್ಮೆ ವಾಸ್ತಾವಂಶವನ್ನು […]

ಕಾಲಭೈರವ ದೇವರನ್ನು ಹೊತ್ತು ಮನೆ ಮನೆಗೆ ತಿರುಗಾಟ, ಜೋಗಿ ಕಟ್ಟುವ ಕಾರ್ಯಕ್ಕೆ ಚಾಲನೆ

ಬೈಂದೂರು:ಹಳಗೇರಿ ಶ್ರೀಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಾಭೈರವ ದೇವಸ್ಥಾನದಲ್ಲಿ ಕಾಲಾನು ಕಾಲದಲ್ಲಿ ನಡೆದು ಬಂದ ಸಂಪ್ರದಾಯದಂತೆ ಜೋಗಿ ಕಟ್ಟುವುದು ಕಾರ್ಯಕ್ರಮ ಶುಕ್ರವಾರ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.ಸುಮಾರು 800 ವರ್ಷಗಳ ಕಾಲ ಇತಿಹಾಸ ಹೊಂದಿರುವ ನಾಥಪರಂಪರೆಯ ಪ್ರಮುಖ ಧಾರ್ಮಿಕ ಕೇಂದ್ರವಾದ ಹಳಗೇರಿ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನ ಸಾಕಷ್ಟು ಇತಿಹಾಸವನ್ನು ಹೊಂದಿರುವ ದೇವಾಲಯಗಳಲ್ಲಿ ಒಂದಾಗಿದೆ.ತೆಂಕಬೆಟ್ಟು ಕ್ಷೇತ್ರದ ಜೋಗಿ ಮನೆತನದವರು ಜೋಗಿ ಕಟ್ಟುವ ಕಾರ್ಯವನ್ನು ಹಲವಾರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬಂದಿರುತ್ತಾರೆ.ಇಂದಿನ ಆಧುನಿಕ ಯುಗದಲ್ಲಿಯೂ ಸಹ ಹಿಂದಿನ […]

ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ನಡೆಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನುಉದ್ಘಾಟಿಸಿ ಮಾತನಾಡಿ,ಹಳ್ಳಿ ಭಾಗದ ಜನರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿ ಕೊಳ್ಳುವುದರಿಂದ ಬದುಕು, ಸಂಸ್ಕೃತಿ ಮತ್ತು ಜೀವನ ಪದ್ಧತಿ […]

You cannot copy content of this page