ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ,ಸಾರ್ವಜನಿಕರಿಂದ ಆಕ್ರೋಶ

ಕುಂದಾಪುರ:ಹೇರಿಕುದ್ರು ಮಹಾಗಣಪತಿ ಯಕ್ಷಗಾನ ಕಲಾ ಮಂಡಳಿ ಹಮ್ಮಿಕೊಂಡಿರುವ ಮಕ್ಕಳ ಯಕ್ಷಗಾನ ಸಪ್ತಾಹದಲ್ಲಿ ಶನಿವಾರ ರಾತ್ರಿ ಪ್ರದರ್ಶನಕ್ಕೆ ಅಡ್ಡಿ ಉಂಟುಮಾಡಿದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ಪ್ರದರ್ಶನದ ನಡುವೆ ಯಕ್ಷಗಾನ ಸಂಘಟಕರು ಅನಿವಾರ್ಯವಾಗಿ ಪ್ರದರ್ಶನ ನಿಲ್ಲಿಸುವ ಪರಿಸ್ಥಿತಿ ಎದುರಾಗಿದ್ದ ಘಟನೆ ನಡೆದಿದೆ. ಸಾರ್ವಜನಿಕ ದೂರಿನ ಹಿನ್ನೆಲೆ ಯಲ್ಲಿ ಪೊಲೀಸರು ಯಕ್ಷಗಾನಪ್ರದರ್ಶನ ನಿಲ್ಲಿಸುವಂತೆ ತಿಳಿಸಿದ್ದರಿಂದ ಅನಿವಾರ್ಯ ಕಾರಣದಿಂದ ಯಕ್ಷಗಾನ ಪ್ರದರ್ಶನ ನಿಲ್ಲಿಸಲಾಗಿದೆ.ಯಕ್ಷಗಾನ ವೇದಿಕೆಯಿಂದ ಚಿಣ್ಣರು ತೆರವು ಆಗಬೇಕೆಂದಾಗ ಪ್ರದರ್ಶನ ನೀಡುತ್ತಿದ್ದ ಮಕ್ಕಳು ಆಚ್ಚರಿ ಗೊಳಗಾದರು.ನಂತರ ಸಭಿಕರಿಗೆ ನಮಿಸಿ ವೇದಿಕೆ ತೆರವು ಗೊಳಿಸಿದರು. […]

ಸೇನಾಪುರ:ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ:ದಿನದಿಂದ ದಿನಕ್ಕೆ ರೈಲು ಪ್ರಯಾಣ ಎನ್ನುವುದು ಜನರಿಗೆ ಬಹಳಷ್ಟು ಅಗತ್ಯವಾಗಿರುವ ಮೂಲ ಸೌಕರ್ಯಗಳಲ್ಲಿ ಒಂದಾಗಿದೆ.ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ ಎನ್ನುವುದು ಸ್ಥಳೀಯ ಜನರಿಗೆ ಮರಿಚಿಕೆ ಆಗಿದ್ದು ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಲುಗಡೆ ಮಾಡಲು ಸಂಸದರ ಜತೆ ಸೇರಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕೊಂಕಣ ರೈಲ್ವೆ ಹೋರಾಟ ಸಮಿತಿ ಸೇನಾಪುರ ವತಿಯಿಂದ ಭಾನುವಾರ ಸೇನಾಪುರ […]

ಮರವಂತೆ:ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

ಬೈಂದೂರು:ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಬಳಕೆದಾರರ ಸಮಸ್ಯೆಗಳಿಗೆ ಹಗಲು,ರಾತ್ರಿ ಎನ್ನದೇ ಸ್ಪಂದಿಸಿ ಉತ್ತಮವಾದ ಸೇವೆಯನ್ನು ನೀಡುವುದರ ಜತಗೆ ಜನ ಪ್ರೀತಿ ಗಳಿಸಿರುವ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಾದ ಲೈನ್‍ಮ್ಯಾನ್ ಮಂಜುನಾಥ ದೇವಾಡಿಗ ಮತ್ತು ಅಲಗೌಡ ಪಾಟೀಲ ಅವರನ್ನು ಸಾಧಾನಾ ಸಮುದಾಯ ವೇದಿಕೆ ಮರವಂತೆ ವತಿಯಿಂದ ಶನಿವಾರ ನಡೆದ ಸಂಘದ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು.ಸಾಧನಾ ಅಧ್ಯಕ್ಷ ಜೇಕ್ಸನ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು,ನಾಗೇಶ್ ಎಸ್.ರಾವ್,ಕೋಶಾಧಿಕಾರಿ ಎಂ.ಸುಬ್ರಹ್ಮಣ್ಯ ಅವಭೃತ,ಕಾರ್ಯದರ್ಶಿ ಗಜೇಂದ್ರ ಖಾರ್ವಿ,ದೇವಿದಾಸ್ ಶ್ಯಾನುಭಾಗ್ ಉಪಸ್ಥಿತರಿದ್ದರು.

You cannot copy content of this page