ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಗಂಟಿಹೊಳೆ ಭೇಟಿ

ಕುಂದಾಪುರ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆಯ ವೈದ್ಯಾಧಿಕಾರಿ ಜತೆ ಚರ್ಚೆಸಿ ಮಾತುಕತೆ ನಡೆಸಿದರು.ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುವಲ್ಲಿ ವೈದ್ಯಾಧಿಕಾರಿಗಳು ಸಹಿತ ಸಿಬ್ಬಂದಿಗಳು ನಿರ್ಲಕ್ಷ್ಯ ತೋರುತ್ತಿದ್ದುದರ ಬಗ್ಗೆ ಮಾಹಿತಿ ಪಡೆದು ತರಾಟೆಗೆ ತೆಗೆದುಕೊಂಡರು.ಕರ್ತವ್ಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಮತ್ತೆ ಇದೇ ರೀತಿ ಮುಂದುವರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ […]

ಬೆಲೆ ಬಾಳುವ ರಕ್ತಚಂದನ ಮರದ ತುಂಡುಗಳು ಸಹಿತ‌,ಆರೋಪಿಗಳು ವಶಕ್ಕೆ

ಮಂಗಳೂರು:ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 125 ಕೆ.ಜಿ ರಕ್ತ ಚಂದನವನ್ನು ದಾಳಿ ಮಾಡಿ ವಶಕ್ಕೆ ಪಡೆದಿದ್ದ ಘಟನೆ ವೇಣೂರು ಕರಿಮಣೇಲು ಎಂಬಲ್ಲಿ ನಡೆದಿದೆ.ಆರೋಪಿಗಳಾದ ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ.ಆರೋಪಿಗಳು ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು ನೇತೃತ್ವದ ತಂಡ ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಮತ್ತು ಸಾಗಾಟಕ್ಕೆ ಬಳಸಿದ ವಾಹನ […]

ಸೈಕಲ್‍ನಲ್ಲಿ ದೇಶಾದ್ಯಂತ ಸುತ್ತಿ ಡ್ರಗ್ಸ್ ಜಾಗೃತಿ ಅಭಿಯಾನ

ಕುಂದಾಪುರ:ಗಾಂಜಾ,ಡ್ರಗ್ಸ್‍ನಂತಹ ಮಾದಕ ವಸ್ತುಗಳಿಗೆ ಯುವಕರು ಬಲಿ ಆಗುತ್ತಿರುವ ಹಿನ್ನೆಲೆಯಲ್ಲಿ ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಛತ್ತೀಸ್‍ಗಢ ರಾಯಭಾಗ್ ಮೂಲದ ನಿವಾಸಿ ನೇಮ್ ಕುಮಾರ್ ಎನ್ನುವ ಯುವಕ ಸೈಕಲ್‍ನಲ್ಲೆ ದೇಶಾದ್ಯಂತ ಸುತ್ತಿ ಮಾದಕ ವಸ್ತುಗಳ ವಿರುದ್ಧ ಅಭಿಯಾನವನ್ನು ಕೈಗೊಂಡಿದ್ದಾರೆ.ಕಳೆದ 75 ದಿನಗಳ ಹಿಂದೆ ಛತ್ತೀಸ್‍ಗಢ ರಾಯಭಾಗ್‍ನಿಂದ ಸೈಕಲ್ ಮೂಲಕ ತೆರಳಿದ್ದ ನೇಮ್ ಕುಮಾರ್ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದಿದ್ದ ಅವರು ಬುಧವಾರ ಕುಂದಾಪುರ ತಾಲೂಕನ್ನು ಪ್ರವೇಶ ಮಾಡಿದ್ದಾರೆ.ಈ ಸೈಕಲ್ ಅಭಿಯಾನ ಒಂದು ವರ್ಷಗಳ ಕಾಲ ಮುಂದುವರೆಯಲಿದ್ದು ದೇಶಾದ್ಯಂತ […]

You cannot copy content of this page