ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆ ಶತಮಾನೋತ್ಸವ ಸಂಭ್ರಮ
ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು.ನೂತನ ರಂಗ ಮಂದಿರ ಉದ್ಘಾಟನೆಯನ್ನು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.ಬೆಳಗೆ ಧ್ವಜರೋಹಣವನ್ನು ಗೋಳಿಹೊಳೆ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ನೆರವೇರಿಸಿದರು.ನಾನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.ದಾನಿಗಳನ್ನು ಗೌರವಿಸಲಾಯಿತು.ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.ನೃತ್ಯ ವೈವಿಧ್ಯ,ಶಿವಭೂತಿ ನಾಟಕ ಹಾಗೂ ಆಟಗಾರ ನಗೆ ನಾಟಕ ನಡೆಯಿತು.ಸಾವಿರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಗುರುವಂದನಾ ಸಮಾರಂಭ ಹಾಗೂ ಸಮಾರೋಪ ಸಮಾರಂಭ ಕಾರ್ಯ ಜರುಗಿತು.ನಾಡೋಜ ಎಸ್ […]





















































































































































































































































































































































































































































































































































































































































































































































































































































































































































































































































































































































































































































































































































































































































































