ನದಿಯಲ್ಲಿ ಮುಳುಗಿದ ಚಿನ್ನದ ಸರ ಹಸ್ತಾಂತರ

ಕುಂದಾಪುರ:ನದಿ ನೀರಿನಲ್ಲಿ ಮುಳುಗಿದ ಸುಮಾರು ಒಂಭತ್ತು ಪವನ್ ತೂಕವನ್ನು ಹೊಂದಿರುವ ಬೆಲೆ ಬಾಳುವ ಚಿನ್ನದ ಸರವನ್ನು ಮುಳುಗುಜತ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಅವರು ಸಂಬಂಧಿಸಿದ ವ್ಯಕ್ತಿಗಳಿಗೆ ಹುಡುಕಿ ಕೊಡುವುದರ ಮುಖೇನ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಶನಿವಾರ ಕಂಡ್ಲೂರು ಸೇತುವೆ ಬಳಿ ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನ್ನಪ್ಪಿರುವ ಕಂದಾವರ ಗ್ರಾಮ ಹೇರಿಕೆರೆ ನಚ್ಚೂರು ನಿವಾಸಿ ಕೃಷ್ಣ ಪೂಜಾರಿ ಅವರ ಕುತ್ತಿಗೆಯಲ್ಲಿದ್ದ ಸುಮಾರು ಒಂಭತ್ತು ಪವನ್ ತೂಕವನ್ನು ಹೊಂದಿರುವ ಚಿನ್ನದ ಸರ ಅವರ ದೇಹದಿಂದ ಬೇರ್ಪಟ್ಟು ನದಿ ನೀರಿನಲ್ಲಿ ಮುಳುಗಿತ್ತು.ಮೃತ ವ್ಯಕ್ತಿ […]

ರೈಲಿನಡಿಗೆ ಸಿಲುಕಿ ಯುವಕ ಸಾವು

ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮದ ತೋಪ್ಲು ನಿವಾಸಿ ವಿಘ್ನೇಶ ಮೊಗವೀರ (30) ಎಂಬುವವರು ಬೈಂದೂರು ತಾಲೂಕಿನ ನಾವುಂದ ಅರೆಹೊಳೆ ಎಂಬಲ್ಲಿ ರೈಲಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.ರೈಲಿನಡಿಗೆ ಸಿಲುಕಿ ನಜ್ಜುಗುಜ್ಜಾಗಿರುವ ಮೃತ ಶರೀರದ ಅವಶೇಷಗಳು ಸುಮಾರು ಅರ್ಧ ಕಿಲೋ ಮೀಟರ್ ತನಕ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಬಬ್ಬಾ ಇಬ್ರಾಹಿಂ ಗಂಗೊಳ್ಳಿ,ಮೌಲಾನ ಶಕೀಲ್,ಸಮೀ ಉಲ್ಲಾ ಕಾಝೀ,ಮಗ್ದೂಮ್ ಅರೆಹೊಳೆ ಅವರು ಮೃತ ಶರೀರದ ಭಾಗಗಳನ್ನು ಸಂಗ್ರಹಿಸಲು ಸಹಕರಿಸಿದರು.ಇಬ್ರಾಹಿಂ ಗಂಗೊಳ್ಳಿ ಆಂಬ್ಯುಲೆನ್ಸ್ ಮೂಲಕ ಶವವನ್ನು ಶವಗಾರಕ್ಕೆ ಸಾಗಿಸಲು ಸಹಕರಿಸಿದರು.

ಕುಂದಾಪುರ ನಾಗ ಬೊಬ್ಬರ್ಯ ದೇವಸ್ಥಾನದಲ್ಲಿ ನಾಗಮಂಡಲೋತ್ಸವ ಸಂಪನ್ನ

ಕುಂದಾಪುರ:ದಿ.ಜಿ.ಕಮಲ ಮತ್ತು ಜಿ.ಸುಬ್ಬಣ್ಣ ಶೇರೆಗಾರರ ಮನೆಯವರಿಂದ ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶ್ರೀ ನಾಗ ಬೊಬ್ಬರ್ಯ ದೇವಸ್ಥಾನ ಕುಂದಾಪುರದ ಮೂಡುಕೇರಿಯಲ್ಲಿ ನಡೆಯಿತು.ಚತುಃಪವಿತ್ರ ನಾಗಮಂಡಲೋತ್ಸವ ಅಂಗವಾಗಿ ಮಹಾಅನ್ನಸಂತರ್ಪಣೆ,ನಾಗಮಂಡಲ ಸೇವೆ ಜರುಗಿತು.ಸಾವಿರಾರರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದವನ್ನು ಸ್ವೀಕಾರ ಮಾಡಿದರು.ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿಗಳಾದ ವೇದಮೂರ್ತಿ ಬಿ.ಲೋಕೇಶ್ ಅಡಿಗ ಬಡಾಕೆರೆ ಅವರು ನಾಗದರ್ಶನ ಸೇವೆಯನ್ನು ನೆರವೇರಿಸಿದರು.ಅಸಂಖ್ಯಾ ಭಕ್ತರು ಮಂಡಲ ಸೇವೆಯನ್ನು ಕಣ್ತುಂಬಿಕೊಂಡರು.ಹೂ ಹಣ್ಣು ಹಂಪಲುಗಳಿಂದ ಮಂಡಲದ ಚಪ್ಪರವನ್ನು ಸಿಂಗಾರ ಮಾಡಲಾಗಿತ್ತು.ನಾರಾಯಣ […]

You cannot copy content of this page