ಆಲೂರು:ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಕುಂದಾಪುರ:ಕಲ್ಪತರು ಕಲಾವಿದರು ಆಲೂರು ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಆಲೂರು ಸರಸ್ವತಿ ಶಾಲೆಯಲ್ಲಿ ಬುಧವಾರ ನಡೆದ ಕನ್ನಡ ಕಲರವ ಕಾರ್ಯಕ್ರಮದಲ್ಲಿ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಾದ ಇಂದಿರಾ,ಗಿರಿಜಾ,ವೆಂಕಮ್ಮ,ಸುಧಾ,ಲಲಿತ ಆಚಾರಿ,ಲಲಿತ ಮೊಗವೀರ,ಸಂಗೀತಾ,ಗುಲಾಬಿ,ಶಾರದ,ಸುಜಾತ,ಸುಶೀಲ,ಶೀಲಾವತಿ,ಕಲ್ಪನಾ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಅತಿಥಿಗಳು,ಸಂಘದ ಸದಸ್ಯರು ಉಪಸ್ಥಿತರಿದ್ದರು.

ಆಲೂರು:ಕನ್ನಡ ಕಲರವ-2023 ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಗ್ರಾಮೀಣ ಭಾರತ ಉಳಿಯಬೇಕಾದರೆ ಸ್ಥಳೀಯ ಭಾಷೆ ಮತ್ತು ಆಚಾರ ವಿಚಾರಗಳನ್ನು ಉಳಿಸುವಂತಹ ಕೆಲಸ ಮಾಡಬೇಕು.ಒಂದೊಂದು ಭಾಷೆ ಒಂದೊಂದು ರೀತಿಯ ಸ್ವಭಾವವನ್ನು ಹೊಂದಿದ್ದು ಭಾಷೆಯ ಆಧಾರದ ಮೇಲೆ ರಾಜ್ಯಗಳ ರಚನೆ ಆಗಿದೆ.ಭಾಷೆ ಎನ್ನುವುದು ಸಾಂಸ್ಕøತಿಕ ಅಸ್ತಿತ್ವದಿಂದ ಕೂಡಿದೆ ಹೊರತು ರಾಜಕೀಯ ಅಸ್ತಿತ್ವದಿಂದಲ್ಲ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯ ಪಟ್ಟರು.ಕನ್ನಡ ರಾಜ್ಯೋತ್ಸವ ಅಂಗವಾಗಿ ಕಲ್ಪತರು ಕಲಾವಿದರು ಆಲೂರು ವತಿಯಿಂದ ಸರಸ್ವತಿ ವಿದ್ಯಾಲಯ ಆಲೂರು ಶಾಲೆಯಲ್ಲಿ ಬುಧವಾರ ನಡೆದ ಎರಡನೇ ವರ್ಷದ ಕನ್ನಡ ಕಲರವ-2023 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಲೆ,ಸಾಹಿತ್ಯ ಮತ್ತು […]

ಹೆಮ್ಮಾಡಿ:ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಸಮಾರಂಭ,ಖೇಲೋ ಜನತಾ 2023 ಉದ್ಘಾಟನೆ

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಖೇಲೋ ಜನತಾ ವಾರ್ಷಿಕ ಕ್ರೀಡಾಕೂಟ- 2023 ಕಾರ್ಯಕ್ರಮ ಗುರುವಾರ ಅದ್ದೂರಿಯಾಗಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಿನ್ಸಿಪಾಲ್ ಗಣೇಶ್ ಮೊಗವೀರರವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಶೆಟ್ಟಿ ಆವರು ಗೌರವ ರಕ್ಷೆಯನ್ನು ಸ್ವೀಕರಿಸಿ,ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿ, ವಿದ್ಯಾರ್ಥಿ ಪ್ರತಿಭೆಗಳಿಗೆ ಕ್ರೀಡಾಕೂಟಗಳು ಅದ್ಭುತವಾದ ವೇದಿಕೆಯಾಗಿದೆ ಜನತಾ ಪದವಿಪೂರ್ವ ಕಾಲೇಜಿನ ಕ್ರೀಡಾ […]

You cannot copy content of this page