ಕೋಟೇಶ್ವರದಲ್ಲಿ ಸರಣಿ ಅಪಘಾತ,ಮೂರು ವಾಹನ ಜಖಂ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರದ ಗುರುಪ್ರಸಾದ್ ಹೋಟೆಲ್ ಸರ್ಕಲ್ ಸಮೀಪ ಭಾನುವಾರ ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಇನ್ಸುಲೇಟರ್ ಕಂಟೈನರ್ ಲಾರಿಯೊಂದು ವೀಲ್ ಜಾಮ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರು ಹಾಗೂ ಸಮೀಪದಲ್ಲೇ ನಿಂತಿದ್ದ ಸರಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಟ್ಟು 3 ವಾಹನಗಳು ಜಖಂಗೊಂಡಿವೆ.ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಕುಟುಂಬವೊಂದು ಕೋಟೇಶ್ವರದ ಕಿನಾರ ಬೀಚ್ ವೀಕ್ಷಿಸಿ ವಾಪಸಾಗುವ ಸಂದರ್ಭ ಕಿನಾರ ರಸ್ತೆಯಿಂದ ಸರ್ವಿಸ್ ರಸ್ತೆ ಮೂಲಕ […]

ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ,ಸಾರ್ವಜನಿಕರಿಂದ ಆಕ್ರೋಶ

ಕುಂದಾಪುರ:ಹೇರಿಕುದ್ರು ಮಹಾಗಣಪತಿ ಯಕ್ಷಗಾನ ಕಲಾ ಮಂಡಳಿ ಹಮ್ಮಿಕೊಂಡಿರುವ ಮಕ್ಕಳ ಯಕ್ಷಗಾನ ಸಪ್ತಾಹದಲ್ಲಿ ಶನಿವಾರ ರಾತ್ರಿ ಪ್ರದರ್ಶನಕ್ಕೆ ಅಡ್ಡಿ ಉಂಟುಮಾಡಿದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.ಪ್ರದರ್ಶನದ ನಡುವೆ ಯಕ್ಷಗಾನ ಸಂಘಟಕರು ಅನಿವಾರ್ಯವಾಗಿ ಪ್ರದರ್ಶನ ನಿಲ್ಲಿಸುವ ಪರಿಸ್ಥಿತಿ ಎದುರಾಗಿದ್ದ ಘಟನೆ ನಡೆದಿದೆ. ಸಾರ್ವಜನಿಕ ದೂರಿನ ಹಿನ್ನೆಲೆ ಯಲ್ಲಿ ಪೊಲೀಸರು ಯಕ್ಷಗಾನಪ್ರದರ್ಶನ ನಿಲ್ಲಿಸುವಂತೆ ತಿಳಿಸಿದ್ದರಿಂದ ಅನಿವಾರ್ಯ ಕಾರಣದಿಂದ ಯಕ್ಷಗಾನ ಪ್ರದರ್ಶನ ನಿಲ್ಲಿಸಲಾಗಿದೆ.ಯಕ್ಷಗಾನ ವೇದಿಕೆಯಿಂದ ಚಿಣ್ಣರು ತೆರವು ಆಗಬೇಕೆಂದಾಗ ಪ್ರದರ್ಶನ ನೀಡುತ್ತಿದ್ದ ಮಕ್ಕಳು ಆಚ್ಚರಿ ಗೊಳಗಾದರು.ನಂತರ ಸಭಿಕರಿಗೆ ನಮಿಸಿ ವೇದಿಕೆ ತೆರವು ಗೊಳಿಸಿದರು. […]

ಸೇನಾಪುರ:ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ:ದಿನದಿಂದ ದಿನಕ್ಕೆ ರೈಲು ಪ್ರಯಾಣ ಎನ್ನುವುದು ಜನರಿಗೆ ಬಹಳಷ್ಟು ಅಗತ್ಯವಾಗಿರುವ ಮೂಲ ಸೌಕರ್ಯಗಳಲ್ಲಿ ಒಂದಾಗಿದೆ.ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ ಎನ್ನುವುದು ಸ್ಥಳೀಯ ಜನರಿಗೆ ಮರಿಚಿಕೆ ಆಗಿದ್ದು ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಲುಗಡೆ ಮಾಡಲು ಸಂಸದರ ಜತೆ ಸೇರಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕೊಂಕಣ ರೈಲ್ವೆ ಹೋರಾಟ ಸಮಿತಿ ಸೇನಾಪುರ ವತಿಯಿಂದ ಭಾನುವಾರ ಸೇನಾಪುರ […]

You cannot copy content of this page