ಅ.29 ರಂದು ದುಬೈನ ಅಜ್ಮಾನ್‍ನಲ್ಲಿ ಕುಂದಗನ್ನಡ ಉತ್ಸವ-2023

ಕುಂದಾಪುರ:ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ವತಿಯಿಂದ ಕುಂದಗನ್ನಡ ಉತ್ಸವ 2023 ಕಾರ್ಯಕ್ರಮ ಅ.29 ರಂದು ದುಬೈನ ಅಜ್ಮಾನ್‍ನಲ್ಲಿ ನಡೆಯಲಿದೆ.ಪ್ರಥಮ ಬಾರಿಗೆ ಶ್ರೀ ಕ್ಷೇತ್ರ ಮಂದಾರ್ತಿ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಉತ್ಸವದಲ್ಲಿ ಅಪರೂಪದ ಸಾಧಕರನ್ನು ಗೌರವಿಸಿ ಕುಂದಾಪುರ ರತ್ನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ರಘುರಾಮ ದೇವಾಡಿಗ ಆಲೂರು ಹೇಳಿದರು.ತ್ರಾಸಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದುಬೈನಲ್ಲಿ ವಾಸವಾಗಿರುವ ಕುಂದಗನ್ನಡಿಗರ ಸಹಾಯ ಹಾಗೂ ದಾನಿಗಳ ಸಹಕಾರದಿಂದ ನಮ್ಮ ಕುಂದಾಪ್ರ ಕನ್ನಡ ಬಳಗ […]

ಅರಾಟೆಯಲ್ಲಿ ಖಾಸಗಿ ಬಸ್ ಪಲ್ಟಿ:20ಕ್ಕೂ ಅಧಿಕ ಮಂದಿಗೆ ಗಾಯ

ಕುಂದಾಪುರ:ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66 ರ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪಕ್ಕದ ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ.ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು,ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂದಾಪುರದಿಂದ ಪ್ರಯಾಣಿಕರನ್ನು ತುಂಬಿಸಿ ಕೊಂಡು ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಮಾರ್ಗದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಬಸ್ […]

ನಾಡ:ಎಸ್ ಪಿ ಪಾರ್ಕ್ ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ ಪುರೋಹಿತರ ಮಾರ್ಗದರ್ಶನದಲ್ಲಿ ಸುದರ್ಶನ ಹೋಮ,ವಾಸ್ತು ಪೂಜೆ, ಗಣಹೋಮ,ಸತ್ಯನಾರಾಯಣ ಪೂಜೆ ಜರುಗಿತು. ಮಾಹಾರಾಜ ಸ್ವಾಮಿ ಮರವಂತೆ ದೇವಸ್ಥಾನ ಆಡಳಿತ ಮೊಕ್ತೇಸರರಾದ ಸತೀಶ್ ಎಂ ನಾಯಕ್ ಮಾತನಾಡಿ,ನಾಡ ಗುಡ್ಡೆಯಂಗಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವಎಸ್ ಪಿ ಪಾರ್ಕ್ ನಲ್ಲಿ ಎಲ್ಲಾ ರೀತಿಯ ಮಳಿಗೆಗಳು ಕಾರ್ಯಾಚರಣೆ ಮಾಡುತ್ತಿರುವುದರಿಂದ ಒಂದೇ ಸೂರಿನಡಿ ಸಕಲ ಸೌಲಭ್ಯಗಳು ಸಿಗಲಿದೆ.ಗ್ರಾಮೀಣ ಪ್ರದೇಶದಲ್ಲಿ […]

You cannot copy content of this page