ನಾಡ:ಐಶ್ವರ್ಯ ಫೈನಾನ್ಸ್ & ಇನ್ವೆಸ್ಟ್‍ಮೆಂಟ್ಸ್ ನೂತನ ಕಛೇರಿ ಉದ್ಘಾಟನೆ

ಕುಂದಾಪುರ:ನಾಡಗುಡ್ಡೆಅಂಗಡಿ ಎಸ್‍ಪಿ ಪಾರ್ಕ್‍ನ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿ ಶುಭರಂಭಗೊಂಡಿರುವ ಐಶ್ವರ್ಯ ಫೈನಾನ್ಸ್ & ಇನ್ವೆಸ್ಟ್‍ಮೆಂಟ್ಸ್ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಾನಾ ಧಾಮಿರ್ಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.ಕಛೇರಿ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪಡುಕೋಣೆ ಚರ್ಚ್ ನ ಧರ್ಮಗುರುಗಳಾದ ಫ್ರಾನ್ಸಿಸ್ ಕನೇಲಿಯಾ ಅವರು ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ಮಾತನಾಡಿ,ಶುಭ ಗಳಿಗೆಯಲ್ಲಿ ಕಛೇರಿ ಉದ್ಘಾಟನೆಗೊಂಡಿರುವುದು ಬಹಳಷ್ಟು ಒಳ್ಳೆಯ ವಿಚಾರವಾಗಿದೆ.ಫೈನಾನ್ಸ್ ಮಾಲೀಕರು ಮತ್ತು ಅವರ ಗ್ರಾಹಕರಿಗೆ ಶುಭವಾಗಲಿ ಎಂದು ಹಾರೈಸಿದರು. ಐಶ್ವರ್ಯ ಫೈನಾನ್ಸ್ ಮುಖ್ಯರಸ್ಥರಾದ ಕೆನಡಿ ಪಿರೇರಾ ಅವರು […]

ಸಮಗ್ರ ಕೃಷಿಯಲ್ಲಿ ರಾಮಯ್ಯ ಶೆಟ್ಟಿ ಕಾಲ್ತೋಡು ಅವರ ವಿಶಿಷ್ಟ ಸಾಧನೆ

ಬೈಂದೂರು:ಕಾಲ್ತೋಡು ಗ್ರಾಮದ ನಿವಾಸಿ 58 ವರ್ಷ ಪ್ರಾಯದ ರಾಮಯ್ಯ ಶೆಟ್ಟಿ ಅವರ ವ್ಯಕ್ತಿತ್ವ ಪಾದರಸದಷ್ಟೆ ಚುರುಕು ಸದಾ ಒಂದಲ್ಲಾ ಒಂದು ಚಟುವಟಿಕೆಯಲ್ಲಿ ನಿರಂತರವಾಗಿ ಭಾಗವಹಿಸುತ್ತಲೆ ಇರುತ್ತಾರೆ,ಕೃಷಿಯಲ್ಲಿ ಅಗಾಧವಾದ ಅನುಭವ ಹೊಂದಿರುವ ರಾಮಯ್ಯ ಶೆಟ್ಟಿ ಅವರು 8ನೇ ತರಗತಿ ವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ.ತನ್ನ 16 ನೇ ವಯಸ್ಸಿನಲ್ಲೇ ಕೃಷಿ ಕ್ಷೇತ್ರಕ್ಕೆ ಧುಮುಕಿದ ಅವರು ಹಿಂದೆ ಮುಂದೆ ನೋಡಲೆ ಇಲ್ಲ ತನ್ನ ವಯಸ್ಸಿನ ದಿನಗಳನ್ನು ಕೃಷಿ ಕಾಯಕದೊಂದಿಗೆ ಕಳೆದ ಕಾಯಕಯೋಗಿ ಎಂದೆ ಹೇಳಬಹುದು.ತನ್ನ 11 ಎಕರೆ ಕೃಷಿ ಭೂಮಿಯಲ್ಲಿ ಸಮಗ್ರ […]

ಶ್ರೀ ಕ್ಷೇತ್ರ ಕೂಡ್ಲು ಬಾಡಬೆಟ್ಟು,ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ,ಚಂಡಿಕಾಹೋಮ ಸಮರ್ಪಣೆ

ಕುಂದಾಪುರ:ತಾಲೂಕಿನ ತಲ್ಲೂರು ಗ್ರಾಮದ ಶ್ರೀ ಕ್ಷೇತ್ರ ಕೂಡ್ಲು ಬಾಡಬೆಟ್ಟು ಕನ್ಯಾನ ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.ನವರಾತ್ರಿ ಉತ್ಸವದ ಒಂಭತ್ತನೇ ದಿನದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ,ಸುಹಾಸಿನಿ ಪೂಜೆ,ಮಹಾಪೂಜೆ,ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ನಡೆಯಿತು.ನೂರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಗಂಧಪ್ರಸಾದ ಸ್ವೀಕರಿಸಿದರು. ಅರ್ಚಕರಾದ ಗುರುರಾಜ ಸೋಮಯಾಜಿ ಮಾತನಾಡಿ,ಕೂಡ್ಲು ಬಾಡಬೆಟ್ಟು ಎನ್ನುವ ಕ್ಷೇತ್ರ ಬಹಳಷ್ಟು ಕಾರಣಿಕವನ್ನು ಹೊಂದಿರುವ ಕ್ಷೇತ್ರವಾಗಿದೆ.ಪ್ರಥಮವಾಗಿ ಶನೀಶ್ವರ […]

You cannot copy content of this page