ಅವಕಾಶಗಳನ್ನು ಬಳಸಿಕೊಳ್ಳದಂತಹ ಪರಿಸ್ಥಿತಿ ನಿರ್ಮಾಣ:ಡಾ.ಹೆಚ್.ಎಸ್ ಶೆಟ್ಟಿ

ಕುಂದಾಪುರ:ಗಂಗೊಳ್ಳಿ ಬಂದರಿನ ಅಭಿವೃದ್ಧಿಯನ್ನು ಕಡೆಗಣಿಸಿದ್ದರಿಂದ ಅವಕಾಶಗಳನ್ನು ಬಳಸಿಕೊಳ್ಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಸಂಪನ್ಮೂಲವನ್ನು ಬಳಸಿಕೊಂಡು ಬೈಂದೂರು ಕ್ಷೇತ್ರದಲ್ಲಿ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಗೊಂಡರೆ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುದರ ಜತೆಗೆ ವಲಸೆ ಪರ್ವಕ್ಕೆ ನಿಯಂತ್ರಣ ಹೇರಿದಂತೆ ಆಗುತ್ತದೆ ಎಂದು ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಹೇಳಿದರು.ತ್ರಾಸಿ ಕೊಂಕಣ ಖಾರ್ವಿ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭ,300 ಟ್ರೀಸ್ ಉದ್ಘಾಟನಾ ಕಾರ್ಯಕ್ರಮ ಹಾಗೂ ಸಮೃದ್ಧ ಬೈಂದೂರು ಅನಾವರಣ ಕಾರ್ಯಕ್ರಮದಲ್ಲಿ ಅಭಿನಂದನಾ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. ದೇಶ,ಸಮಾಜ ಕಟ್ಟಬೇಕಾದರೆ ಮಾತ್ರ ಭಾಷೆ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು […]

ನಾಡ:ಶ್ರೀಗಣಪತಿ ದೇವರ ವಿಸರ್ಜನಾ ಮೆರವಣಿಗೆ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ಶ್ರೀಯೋಗಿ ರಾಜ್ ನಾರಾಯಣ ವಿಠಲ ಅವರ ಮನೆಯಲ್ಲಿ ಗಣೇಶ ಚೌತಿ ದಿನದಂದು ಪ್ರತಿಷ್ಠಾಪಿಸಲ್ಪಟ್ಟ ಗಣಪತಿ ದೇವರ ಮೂರ್ತಿಯನ್ನು 21 ದಿನಗಳ ಕಾಲ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಿಸಿ ಭಾನುವಾರ ಭವ್ಯ ಮೆರವಣಿಗೆ ಮೂಲಕ ಸೌಪರ್ಣಿಕಾ ನದಿಯಲ್ಲಿ ಜಲಸ್ತಂಭನ ಮಾಡಲಾಯಿತು.

ಬೈಂದೂರು ಕ್ಷೇತ್ರದಲ್ಲಿ ಸಾಮಾಜಿಕ ಕ್ರಾಂತಿ ಸೃಷ್ಟಿ ಆಗಲಿದೆ-ಕೋಟ ಶ್ರೀನಿವಾಸ ಪೂಜಾರಿ

ಸಮೃದ್ಧ ಬೈಂದೂರು ಪರಿಕಲ್ಪನೆ ಅನಾವರಣ,300 ಟ್ರೀಸ್ ಉದ್ಘಾಟನಾ ಕಾರ್ಯಕ್ರಮಕುಂದಾಪುರ:ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರಿಗೆ ಅಭಿನಂದನೆ,ಸರಕಾರಿ ಶಾಲೆಗಳ ಉಳಿವು ಮತ್ತು ಅಭಿವೃದ್ಧಿಗಾಗಿ ವಿಶಿಷ್ಟ ಯೋಜನೆಯ 300 ಟ್ರೀಸ್ ಉದ್ಘಾಟನಾ ಸಮಾರಂಭ ಹಾಗೂ ಸಮೃದ್ಧ ಬೈಂದೂರು ಪರಿಕಲ್ಪನೆ ಅನಾವರಣ ಕಾರ್ಯಕ್ರಮ ತ್ರಾಸಿ ಕೊಂಕಣ ಖಾರ್ವಿ ಸಂಭಾಗಣದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು.ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ದಶಕಗಳ ಬೈಂದೂರು ಕ್ಷೇತ್ರದ ಸಂಪರ್ಕದ ಆಧಾರದಲ್ಲಿ ಸಮೃದ್ಧ ಬೈಂದೂರು ನಿರ್ಮಾಣಕ್ಕೆ ಹೆಜ್ಜೆ ಇಟ್ಟಿರುವುದು ಒಂದು ರೀತಿಯ […]

You cannot copy content of this page