ಹಕ್ಲಾಡಿ:ಗುರುಗಳನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು-ಸಾಹಿತಿ ಕೆ.ರಘುರಾಮ ಶೆಟ್ಟಿ

ಕುಂದಾಪುರ:ಹಕ್ಲಾಡಿ ಸರಕಾರಿ ಪ್ರೌಢಶಾಲೆಯ 1981-82 ರ ಬ್ಯಾಚ್‍ನ ಹಳೆ ವಿದ್ಯಾರ್ಥಿಗಳ ವತಿಯಿಂದ ಮಿತ್ರ ಸಂಗಮ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಕ್ಲಾಡಿ ಪ್ರೌಢಶಾಲೆಯಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಸಾಹಿತಿ ಹಾಗೂ ಪ್ರಸಂಗಕರ್ತರಾದ ನಿವೃತ್ತ ಶಿಕ್ಷಕ ಕೆ.ರಘುರಾಮ ಶೆಟ್ಟಿ ಉದ್ಘಾಟಿಸಿ ಮಾತನಾಡಿ,ತಂದೆ ತಾಯಿಯನ್ನು ಗೌರವ ಭಾವನೆಯಿಂದ ನೋಡಿದಂತೆ ಗುರುಗಳನ್ನು ಸಹ ಗೌರವಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು.ಗುರುಗಳು ಹೇಳಿದಂತಹ ವಿಚಾರಗಳನ್ನು ನಿತ್ಯವೂ ಅನುಷ್ಠಾನ ಮಾಡುವುದರಿಂದ ಉತ್ತಮವಾದ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಒಂದೆ ಶಾಲೆಯಲ್ಲಿ ಒಟ್ಟಾಗಿ ಕಲಿಯುತ್ತಿದ್ದ ವಿದ್ಯಾರ್ಥಿಗಳು ಸರಿ ಸುಮಾರು 42 […]

ಹೊಸಾಡು:ಪದಾಧಿಕಾರಿಗಳ ಆಯ್ಕೆ,ವಾರ್ಷಿಕ ಮಹಾಸಭೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಮಟ್ಟದ ವಾರ್ಡ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಹೊಸಾಡು ಪಂಚಾಯತ್ ಸಭಾಭವನದಲ್ಲಿ ಬುಧವಾರ ನಡೆಯಿತು.ಸೌಪರ್ಣಿಕಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಂದನಾ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ತಾಲೂಕು ಒಕ್ಕೂಟ ಅಧ್ಯಕ್ಷೆ ವಿಜಯ ಗಾಣಿಗ,ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ಯತೀಶ್,ಪಿಡಿಒ ಪಾರ್ವತಿ,ಹೊಸಾಡು ಆಡಳಿತಾಧಿಕಾರಿ ರಘುರಾಮ ಶೆಟ್ಟಿ,ವಾರ್ಡ್ ಅಧ್ಯಕ್ಷೆ ರೇಖಾ,ಒಕ್ಕೂಟದ ಕಾರ್ಯದರ್ಶಿ ಪಲ್ಲವಿ,ಆಶಾ ಕಾರ್ಯಕರ್ತೆಯರಾದ ಪ್ರೇಮಾ ಬಳೆಗಾರ್,ಪ್ರೇಮಾ ಭಂಡಾರಿ ಉಪಸ್ಥಿತರಿದ್ದರು.ಒಕ್ಕೂಟದ ಅಧ್ಯಕ್ಷರಾಗಿ ಯಶೋಧ ವಳನಾಡು,ಉಪಾಧ್ಯಕ್ಷೆ […]

ಬೋಳಂಬಳ್ಳಿ:ಶ್ರೀ ಪಾರ್ಶ್ವನಾಥ ಶ್ರೀ ಪದ್ಮಾವತಿ ದೇವಿ ಬಸದಿ ಇತಿಹಾಸ

ಕುಂದಾಪುರ:ಕಾರಣಿಕ ಕ್ಷೇತ್ರವಾದ ಶ್ರೀ ಪಾರ್ಶ್ವನಾಥ ತೀರ್ಥಂಕರ ಮತ್ತು ಶ್ರೀ ಪದ್ಮಾವತಿ ದೇವಿಯ ಬಸದಿಯ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಅವರು ದೇವಸ್ಥಾನದ ಇತಿಹಾಸ ಕುರಿತು ಮಾತನಾಡುತ್ತಾ,15 ವರ್ಷಗಳ ಇತ್ತೀಚಿಗೆ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆದಿದೆ,ಕ್ಷೇತ್ರದ ದೇವರಿಗೆ ತ್ರಿಕಾಲ ಪೂಜೆಯನ್ನು ನೆರವೇರಿಸಲಾಗುತ್ತಿದೆ ದೇವಸ್ಥಾನಕ್ಕೆ ಊರಪರೂರಿನ,ಹೊರ ರಾಜ್ಯದ ಭಕ್ತರು ಬರುತ್ತಾರೆ ಅನ್ಯ ಧರ್ಮದ ಭಕ್ತಾದಿಗಳು ಸಹ ಕ್ಷೇತ್ರಕ್ಕೆ ಬಂದು ಹರಕೆಯನ್ನು ಸಲ್ಲಿಸಿ ಹೋಗುತ್ತಿದ್ದಾರೆ.ಭಕ್ತರ ಕಷ್ಟಕಾರ್ಪಣ್ಯಗಳಿಗೆ ಮುಕ್ತಿ ನೀಡಿದಂತಹ ಅದೆಷ್ಟೊ ನಿದರ್ಶನಗಳಿವೆ ಎಂದರು.ಮಾನವ ಜೀವನದಲ್ಲಿ ಎದುರಾಗುವಂತಹ ಕಷ್ಟಗಳಿಗೆ,ಮಕ್ಕಳಾಗದೆ ಇದ್ದವರಿಗೆ,ಜಾಗದ ತೊಂದರೆ ಇದ್ದವರೂ,ಮಾನಸಿಕ ಕಾಯಿಲೆಯಿಂದ […]

You cannot copy content of this page