ಮರವಂತೆ:ಕ್ಯಾನ್ಸರ್ ಕಾಯಿಲೆ ಮಾಹಿತಿ ಕಾರ್ಯಕ್ರಮ

ಬೈಂದೂರು:ಆರಂಭಿಕ ಹಂತದಲ್ಲೆ ಕ್ಯಾನ್ಸರ್‍ಗೆ ಸೂಕ್ತ ಚಿಕಿತ್ಸೆಯನ್ನು ನೀಡುವುದರಿಂದ ಗುಣ ಪಡಿಸಲು ಸಾಧ್ಯವಿದೆ ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿಯ ತಜ್ಞ ವೈದ್ಯ ಡಾ.ಹೇಮಂತ ಕುಮಾರ್ ಹೇಳಿದರು.ಸಾಧನಾ ವೇದಿಕೆ ಮರವಂತೆ,ಪ್ರಾಥಮಿಕ ಆರೋಗ್ಯ ಕೇಂದ್ರ,ಆಸರೆ ಚಾರಿಟಬಲ್ ಟ್ರಸ್ಟ್, ಸ್ನೇಹಾ ಮಹಿಳಾ ಮಂಡಳಿ,ಹೋಲಿ ಫ್ಯಾಮಿಲಿ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್,ಚೇತನಾ ಚಿಕಿತ್ಸಾಲಯ ಅವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ ಕ್ಯಾನ್ಸರ್ ಕಾಯಿಲೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ […]

ಗಂಗೊಳ್ಳಿ:ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಖಾರ್ವಿಕೇರಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅ.15 ರಿಂದ ಅ.24 ರ ವರಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಹೋಮ,ಮಹಾಪೂಜೆ,ದುರ್ಗಾಹೋಮ ಮತ್ತು ವಿಶೇಷ ಪೂಜೆ ನಡೆಯಲಿದೆ.ಅ.24 ರಂದು ಸಾಮೂಹಿಕ ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.

ಕೆಳಾಕಳಿ:ಶ್ರೀಮಾರಿಕಾಂಬಾ ದೇವಿ ದೇವಸ್ಥಾನ

ಕುಂದಾಪುರ:ತಾಲೂಕಿನ ಪ್ರಸಿದ್ಧ ಹಕ್ಲಾಡಿ ಗ್ರಾಮದ ಕೆಳಾಕಳಿ ಶ್ರೀಮಾರಿಕಾಂಬಾ ದೇವಿ ದೇವಸ್ಥಾನದಲ್ಲಿ 9ನೇ ವರ್ಷದ ಶ್ರೀ ಶರನ್ನವರಾತ್ರಿ ಉತ್ಸವ ಕಾರ್ಯಕ್ರಮ ಅ.15 ಭಾನುವಾರ ದಿಂದ ಆರಂಭಗೊಂಡು ಅ.24 ಮಂಗಳವಾರದ ವರೆಗೆ ನಡೆಯಲಿದೆ. ಶ್ರೀ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಶ್ರೀದೇವಿಯ ಸಾನಿಧ್ಯದಲ್ಲಿ ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀದೇವಿಗೆ ವಿಶೇಷ ಪೂಜೆ ಜರುಗಲಿದೆ.ಅ.23 ರಂದು ಸೋಮವಾರ ಬೆಳಿಗ್ಗೆ 9 ರಿಂದ ದುರ್ಗಾಹೋಮ ಮತ್ತು ಚಂಡೆವಾದನ,ಮಧ್ಯಾಹ್ನ 11.30 ಕ್ಕೆ ಭಕ್ತಿ ರಸಮಂಜರಿ,12 ಕ್ಕೆ ಮಹಾಪೂಜೆ […]

You cannot copy content of this page