ಗಂಗೊಳ್ಳಿ:ಪ್ರಾರ್ಥನಾ ಪೈಗೆ ಪ್ರಥಮ ಸ್ಥಾನ

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಜೈನ್ ಕ್ರೀಡಾ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಪ್ರಥಮ ಸ್ಥಾನಗಳಿಸಿದ್ದಾರೆ.ಪತ್ರಕರ್ತ ಬಿ.ರಾಘವೇಂದ್ರ ಪೈ ಗಂಗೊಳ್ಳಿ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ.

ಕೋಳಿ ಅಂಕ,ಜುಗಾರಿ ಅಡ್ಡಕ್ಕೆ ದಾಳಿ

ಕುಂದಾಪುರ:ತಾಲೂಕಿನ ನೂಜಾಡಿ ಗ್ರಾಮದ ಬ್ರಹ್ಮೇರಿ ನರಸಿಂಹ ದೇವಸ್ಥಾನದ ಬಳಿ ಸರಕಾರಿ ಹಾಡಿಯಲ್ಲಿ ಕೋಳಿ ಜುಗಾರಿ ಆಟ ಆಡುತ್ತಿದ್ದ ಅಡ್ಡಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಠಾಣೆಯ ಪೆÇಲೀಸರು ಆಪಾದಿತರಾದ ಸಂದೇಶ ಪೂಜಾರಿ,ಅನಿಲ್ ಮೊಗವೀರ,ದಿನೇಶ ಪೂಜಾರಿ,ಸುಕುಮಾರ ಪೂಜಾರಿ ಅವರನ್ನು ವಶಕ್ಕೆ ಪಡೆದಿದ್ದಾರೆ.ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿಎಸ್‍ಐ ಹರೀಶ್.ಆರ್ ಮತ್ತು ಸಿಬ್ಬಂದಿಗಳಾದ ಚಂದ್ರು,ರಾಘವೇಂದ್ರ ಪೂಜಾರಿ,ಕೇಶವ,ಸಂದೀಪ್ ಮತ್ತು ಮಾಲಿಂಗ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕೋಳಿ ಜುಗಾರಿ ಆಟಕ್ಕೆ ಬಳಸಿದ ಸುಮಾರು 2500.ರೂ ಮೊತ್ತದ ಐದು ಕೋಳಿ ಹುಂಜ,2120.ರೂ ನಗದು ಹಾಗೂ ಆಟೋ […]

ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನ ಬೆಣ್ಗೆರೆ ಗುಜ್ಜಾಡಿ

ಕುಂದಾಪುರ:ನಂಬಿದ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಸುಮಾರು 2 ಕೋಟಿ.ಗೂ ಅಧಿಕ ಹಣವನ್ನು ವೆಚ್ಚ ಮಾಡಿ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಕಾಳಿ ಸಪರಿವಾರ ಗರಡಿ ದೇವಸ್ಥಾನವನ್ನು ಕಳೆದ ಐದು ವರ್ಷಗಳ ಹಿಂದೆ ಜೀರ್ಣೋದ್ಧಾರ ಕೆಲಸವನ್ನು ಮಾಡಲಾಗಿದೆ.ಸಾರ್ವಜನಿಕರು ಮತ್ತು ಊರಿನವರಿಗೆ ಹಾಗೂ ಭಕ್ತರಿಗೆ ಅನುಕೂಲ ವಾಗುವ ದೃಷ್ಟಿಯಿಂದ ಸಭಾಭವನವನ್ನು ನಿರ್ಮಿಸಲಾಗಿದ್ದು ಹಣ ಕೊರತೆಯಿಂದ ಕಟ್ಟಡದ ನಿರ್ಮಾಣದ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಸಭಾಭವನದ ನಿರ್ಮಾಣದ ಕೆಲಸವ್ನನು ಪೂರ್ಣಗೊಳಿಸಲು ಸರಕಾರ ಮತ್ತು ದಾನಿಗಳು,ಭಕ್ತಾದಿಗಳು ಸಹಕಾರವನ್ನು ನೀಡಬೇಕೆಂದು ದೇವಸ್ಥಾನದ ಸಮಿತಿ […]

You cannot copy content of this page