ಗುಜ್ಜಾಡಿ:5ನೇ ವರ್ಷದ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ 5ನೇ ವರ್ಷದ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀ ದೇವರಿಗೆ ಚಂಡಿಕಾಯಾಗ ಮತ್ತು ಮಹಾಅನ್ನಸಂತರ್ಪಣೆ,ಕುಣಿತ ಭಜನೆ ಹಾಗೂ ಸನ್ಮಾನ ಕಾರ್ಯಕ್ರಮ,ಸ್ಥಳೀಯ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.ದೇವಸ್ಥಾನದ ಸಮಿತಿ ಅಧ್ಯಕ್ಷ ಬಾಬು.ಜೆ ಪೂಜಾರಿ ಉಪ್ಪುಂದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉಪಾಧ್ಯಕ್ಷ ಕೃಷ್ಣ ಪೂಜಾರಿ,ಎಸ್.ಕೆ ಪೂಜಾರಿ ಬಗ್ವಾಡಿ,ನರಸಿಂಹ ಪೂಜಾರಿ ಅರೆಶಿರೂರು,ಆರತಿ ಎಡಕಂಟ,ಸತೀಶ ವಕ್ವಾಡಿ,ಬಾಬು ಪೂಜಾರಿ ಎಡಕಂಟ,ದುಗಪ್ಪ ಪೂಜಾರಿ ತಾರಾಪತಿ,ಕೆ.ಸುರೇಶ್ ಪೂಜಾರಿ ಚಿತ್ತೂರು,ಮಹಾಬಲ ದೇವಾಡಿಗ,ಉದಯ ಪೂಜಾರಿ […]

ಅಡಿಕೆ ಕೃಷಿಯಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಂಡ-ಮಡ್ಲಗೇರಿ ಬಾಬು ಆಚಾರ್ಯ

ಕುಂದಾಪುರ:ಬೈಂದೂರು ತಾಲೂಕಿನ ಹೇರೂರು ಗ್ರಾಮದ ಮಡ್ಲಗೇರಿ ನಿವಾಸಿಯಾದ ಬಾಬು ಆಚಾರ್ಯ ಅವರು ಬಿ.ಕಾಂ ಪದವೀಧರನಾಗಿದ್ದರೂ ಅವರ ಒಲವು ಮಾತ್ರ ಕೃಷಿ ಕ್ಷೇತ್ರದತ್ತ ಸೆಳೆದಿದೆ.ಕಳೆದ 30 ವರ್ಷಗಳಿಂದ ಕೃಷಿಯಲ್ಲಿ ತೊಡಗಿಕೊಂಡಿರುವ ಅವರು ರಾಸಾಯನಿಕ ಗೊಬ್ಬರವನ್ನು ಬಳಕೆ ಮಾಡದೆ ಕೊಟ್ಟಿಗೆ ಗೊಬ್ಬರ,ಜೀವಾಮೃತ,ಎರೆಹುಳ ಗೊಬ್ಬರವನ್ನು ಉಪಯೋಗಿಸಿಕೊಂಡು ವಿನೂತನ ರೀತಿಯಲ್ಲಿ ತೋಟಗಾರಿಕೆ ಕೃಷಿಯನ್ನು ಮಾಡುತ್ತಾ ಜೀವನೋಪಾಯ ಕಂಡುಕೊಂಡಿದ್ದಾರೆ.ತಮ್ಮ 5 ಎಕರೆ ಕೃಷಿ ಭೂಮಿಯಲ್ಲಿ ಅಡಿಕೆ,ಕಾಳು ಮೆಣಸು ಮತ್ತು ತೆಂಗಿನ ಕೃಷಿ ಮಾಡಿಕೊಂಡು ಆದಾಯವನ್ನು ಗಳಿಸುವುದರ ಮುಖೇನ ಸ್ವಾಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.ಕೃಷಿ ತೋಟದ ರಚನೆ […]

ಹೊಸಾಡು:ಕೃಷಿ ತರಬೇತಿ ಕಾರ್ಯಕ್ರಮ

ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೈಂದೂರು,ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಕೃಷಿ ತರಬೇತಿ ಕಾರ್ಯಕ್ರಮ ಹೊಸಾಡು ಗ್ರಾಮದ ಕಮ್ಮಾರ ಕೊಡ್ಲು ಹಿಜಾಣ ಚಿಕ್ಕು ದೇವಸ್ಥಾನದ ವಠಾರದಲ್ಲಿ ಬುಧವಾರ ನಡೆಯಿತು.ಒಕ್ಕೂಟದ ಮಾಜಿ ಅಧ್ಯಕ್ಷೆ ವಸಂತಿ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು,ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಹೊಸಾಡು ಒಕ್ಕೂಟದ ನಿರ್ದೇಶಕ ಶಿವರಾಮ ಶೆಟ್ಟಿ,ಕೃಷಿ ಮೇಲ್ವಿಚಾರಕ ರಾಜು,ಧ.ಗ್ರಾ.ಯೋಜನೆ ಪಡುಕೋಣೆ ವಲಯ ಮೇಲ್ವಿಚಾರಕಿ ಪಾರ್ವತಿ,ಯಂತ್ರಶ್ರೀ ಸಹಾಯಕ ಗಣೇಶ ಉಪಸ್ಥಿತರಿದರು.ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಸಿಇಒ ಅನಿಲ್ ಸಾವಯವ ಗೊಬ್ಬರ,ರಸಗೊಬ್ಬರ […]

You cannot copy content of this page