ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನ ಬೆಣ್ಗೆರೆ ಗುಜ್ಜಾಡಿ
ಕುಂದಾಪುರ:ನಂಬಿದ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಸುಮಾರು 2 ಕೋಟಿ.ಗೂ ಅಧಿಕ ಹಣವನ್ನು ವೆಚ್ಚ ಮಾಡಿ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಕಾಳಿ ಸಪರಿವಾರ ಗರಡಿ ದೇವಸ್ಥಾನವನ್ನು ಕಳೆದ ಐದು ವರ್ಷಗಳ ಹಿಂದೆ ಜೀರ್ಣೋದ್ಧಾರ ಕೆಲಸವನ್ನು ಮಾಡಲಾಗಿದೆ.ಸಾರ್ವಜನಿಕರು ಮತ್ತು ಊರಿನವರಿಗೆ ಹಾಗೂ ಭಕ್ತರಿಗೆ ಅನುಕೂಲ ವಾಗುವ ದೃಷ್ಟಿಯಿಂದ ಸಭಾಭವನವನ್ನು ನಿರ್ಮಿಸಲಾಗಿದ್ದು ಹಣ ಕೊರತೆಯಿಂದ ಕಟ್ಟಡದ ನಿರ್ಮಾಣದ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಸಭಾಭವನದ ನಿರ್ಮಾಣದ ಕೆಲಸವ್ನನು ಪೂರ್ಣಗೊಳಿಸಲು ಸರಕಾರ ಮತ್ತು ದಾನಿಗಳು,ಭಕ್ತಾದಿಗಳು ಸಹಕಾರವನ್ನು ನೀಡಬೇಕೆಂದು ದೇವಸ್ಥಾನದ ಸಮಿತಿ […]



























































































































































































































































































































































































































































































































































































































































































































































































































































































































































































































































































































































































































































































































































































































































































