ಚರ್ಮರೋಗ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ ನಿರ್ಲಕ್ಷಿಸ ಬಾರದು- ಡಾ.ಕೆ.ಪ್ರೇಮಾನಂದ

ಕುಂದಾಪುರ:ಚರ್ಮರೋಗ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ ನಿರ್ಲಕ್ಷಿಸುವುದು ಸರಿಯಲ್ಲ.ಕಾಯಿಲೆ ಇನ್ನಷ್ಟು ಉಲ್ಬಣಗೊಂಡಾಗ ದೇಹದ ಅನ್ಯ ವ್ಯವಸ್ಥೆಗಳ ಮೇಲೂ ಪ್ರಭಾವಬೀರಿ ಸಮಸ್ಯೆ ಸೃಷ್ಟಿ ಆಗುತ್ತದೆ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಪ್ರೇಮಾನಂದ ಹೇಳಿದರು.ಜಿಲ್ಲಾ ಪಂಚಾಯತ್ ಉಡುಪಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕುಷ್ಠರೋಗ ನಿರ್ಮೂಲನ ವಿಭಾಗ,ತಾಲೂಕು ಆರೋಗ್ಯ ಇಲಾಖೆ,ಸಾಧನಾ ಜನಾರ್ದನ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ ಚರ್ಮರೋಗ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.ಚರ್ಮರೋಗ ತಜ್ಞ ಡಾ.ಉಮೇಶ ನಾಯಕ್ ಕುಷ್ಠರೋಗದ ಕುರಿತು ಮಾಹಿತಿ ನೀಡಿ […]

ಅ.29 ರಂದು ದುಬೈನ ಅಜ್ಮಾನ್‍ನಲ್ಲಿ ಕುಂದಗನ್ನಡ ಉತ್ಸವ-2023

ಕುಂದಾಪುರ:ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ವತಿಯಿಂದ ಕುಂದಗನ್ನಡ ಉತ್ಸವ 2023 ಕಾರ್ಯಕ್ರಮ ಅ.29 ರಂದು ದುಬೈನ ಅಜ್ಮಾನ್‍ನಲ್ಲಿ ನಡೆಯಲಿದೆ.ಪ್ರಥಮ ಬಾರಿಗೆ ಶ್ರೀ ಕ್ಷೇತ್ರ ಮಂದಾರ್ತಿ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಉತ್ಸವದಲ್ಲಿ ಅಪರೂಪದ ಸಾಧಕರನ್ನು ಗೌರವಿಸಿ ಕುಂದಾಪುರ ರತ್ನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ರಘುರಾಮ ದೇವಾಡಿಗ ಆಲೂರು ಹೇಳಿದರು.ತ್ರಾಸಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದುಬೈನಲ್ಲಿ ವಾಸವಾಗಿರುವ ಕುಂದಗನ್ನಡಿಗರ ಸಹಾಯ ಹಾಗೂ ದಾನಿಗಳ ಸಹಕಾರದಿಂದ ನಮ್ಮ ಕುಂದಾಪ್ರ ಕನ್ನಡ ಬಳಗ […]

ಅರಾಟೆಯಲ್ಲಿ ಖಾಸಗಿ ಬಸ್ ಪಲ್ಟಿ:20ಕ್ಕೂ ಅಧಿಕ ಮಂದಿಗೆ ಗಾಯ

ಕುಂದಾಪುರ:ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66 ರ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪಕ್ಕದ ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ.ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು,ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂದಾಪುರದಿಂದ ಪ್ರಯಾಣಿಕರನ್ನು ತುಂಬಿಸಿ ಕೊಂಡು ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಮಾರ್ಗದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಬಸ್ […]

You cannot copy content of this page