ನಾಡ:ಎಸ್ ಪಿ ಪಾರ್ಕ್ ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟನೆ
ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ ಪುರೋಹಿತರ ಮಾರ್ಗದರ್ಶನದಲ್ಲಿ ಸುದರ್ಶನ ಹೋಮ,ವಾಸ್ತು ಪೂಜೆ, ಗಣಹೋಮ,ಸತ್ಯನಾರಾಯಣ ಪೂಜೆ ಜರುಗಿತು. ಮಾಹಾರಾಜ ಸ್ವಾಮಿ ಮರವಂತೆ ದೇವಸ್ಥಾನ ಆಡಳಿತ ಮೊಕ್ತೇಸರರಾದ ಸತೀಶ್ ಎಂ ನಾಯಕ್ ಮಾತನಾಡಿ,ನಾಡ ಗುಡ್ಡೆಯಂಗಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವಎಸ್ ಪಿ ಪಾರ್ಕ್ ನಲ್ಲಿ ಎಲ್ಲಾ ರೀತಿಯ ಮಳಿಗೆಗಳು ಕಾರ್ಯಾಚರಣೆ ಮಾಡುತ್ತಿರುವುದರಿಂದ ಒಂದೇ ಸೂರಿನಡಿ ಸಕಲ ಸೌಲಭ್ಯಗಳು ಸಿಗಲಿದೆ.ಗ್ರಾಮೀಣ ಪ್ರದೇಶದಲ್ಲಿ […]























































































































































































































































































































































































































































































































































































































































































































































































































































































































































































































































































































































































































































































































































































































































































