ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು,ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ

ಕುಂದಾಪುರ:ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಸರಸ್ಪತಿ ವಿದ್ಯಾಲಯ ಸಿದ್ದಾಪುರದಲ್ಲಿ ನಡೆಯಿತು.ತಾಲೂಕು ಮಟ್ಟದ ಕ್ರೀಡಾಕೂಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದಯಡಾಡಿ- ಮತ್ಯಾಡಿ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ 17 ರ ವಯೋಮಾನದ ಒಳಗಿನ ವಿದ್ಯಾರ್ಥಿಗಳಾದ ಯತೀಶ್ ಶೆಟ್ಟಿ ಗುಂಡು ಎಸೆತದಲ್ಲಿ ಪ್ರಥಮ, ಸನ್ವಿತ್ ಪಿ. ಶೆಟ್ಟಿ 110 ಮಿ. ಹರ್ಡಲ್ಸ್ ನಲ್ಲಿ ಪ್ರಥಮ ,ಸಿರಿಕಾ ಗುಂಡು ಎಸೆತ ದ್ವಿತೀಯ ಮತ್ತು ಪ್ರಧಾನ್ ಹೆಗ್ಡೆ 200 […]

ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತೇಜಸ್ವಿ ಮಿಥುನ್ ಆಯ್ಕೆ.

ಕುಂದಾಪುರ:ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಗ್ರಾಮೀಣ ಐ‌.ಟಿ. ಕ್ವಿಜ್ ನಲ್ಲಿ ಸ್ಪರ್ಧಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ವಿದ್ಯಾರ್ಥಿ ತೇಜಸ್ವಿ ಮಿಥುನ್ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಸೇನಾಪುರ:ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ:ತಾಲೂಕಿನ ಸೇನಾಪುರ ಕೊಂಕಣ ರೈಲು ನಿಲ್ದಾಣದಲ್ಲಿ ಎಲ್ಲಾ ಮಾದರಿಯ ಎಕ್ಸ್ ಪ್ರೆಸ್ ರೈಲು ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ರೈಲು ಹೋರಾಟ ಸಮಿತಿ ಸೇನಾಪುರ ಹಾಗೂ ವತಿಯಿಂದ ನಾಡ ಗ್ರಾಮ ಪಂಚಾಯತ್ ಬಳಿಯಿಂದ ಸೇನಾಪುರ ರೈಲು ನಿಲ್ದಾಣದ ಒರಗೆ ಬೃಹತ್ ಕಾಲ್ನಡಿಗೆ ಜಾಥಾ ಮಂಗಳವಾರ ನಡೆಯಿತು.ಹಲವಾರು ಸಂಘಟನೆಯ ಸದಸ್ಯರು,ಗ್ರಾಮಸ್ಥರು,ಸಾರ್ವಜನಿಕರು ಗುಜ್ಜಾಡಿ,ನಾಡ,ಆಲೂರು,ಹಕ್ಲಾಡಿ,ಹೊಸಾಡು,ತ್ರಾಸಿ ಸೇರಿದಂತೆ ಹಲವಾರು ಪಂಚಾಯಿತಿಗಳ ಅಧ್ಯಕ್ಷರು ಮತ್ತು ಸದಸ್ಯರು,ಹೋರಾಟ ಸಮಿತಿ ಮುಖಂಡರುಗಳು,ರೈತರು,ಮಹಿಳೆಯರು ಹೋರಾಟದಲ್ಲಿ ಭಾಗಿಯಾಗಿದ್ದರು.ಪತ್ರಿಭಟನೆ ಸಭೆ ಬಳಿಕ ರೈಲ್ವೆ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.ಪೆÇಲೀಸ್ ಇಲಾಖೆ ವತಿಯಿಂದ ಬಿಗಿ ಬಂದೋ […]

You cannot copy content of this page