ನಾಡ:ಅಂಬಾ ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್, ಫರ್ನಿಚರ್ ಶೋ ರೂಂ ಉದ್ಘಾಟನೆ

ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್.ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಅಂಬಾ ಶೋರೂಂ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು. ಅಂಬಾ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಶೋ ರೂಂ ಮಾಲೀಕರಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,ನಾಡಗುಡ್ಡೆಯಂಗಡಿಯಲ್ಲಿ ಕಳೆದ 15 ವರ್ಷಗಳಿಂದ ಎಲೇಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಉತ್ಪನ್ನಗಳ ಮಾರಾಟವನ್ನು ಮಾಡಿಕೊಂಡು ಬರಲಾಗುತ್ತಿದೆ,ಇದೀಗ ನೂತನ ವಿನ್ಯಾಸದೊಂದಿಗೆ ಶೋರೂಂ ಅನ್ನು ನಿರ್ಮಾಣ ಮಾಡಲಾಗಿದ್ದುನವರಾತ್ರಿ ಉತ್ಸವದ ಶುಭ ಸಂದರ್ಭದಲ್ಲಿ ಶುಭಾರಂಭಗೊಂಡಿದೆ.ಹಬ್ಬದ ಪ್ರಯುಕ್ತ ವಿಶೇಷವಾಗಿ […]

ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ,ಚಂಡಿಕಾ ಹೋಮ ಸಮರ್ಪಣೆ

ಕುಂದಾಪುರ:ಕರಸ್ಥಳ ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಉಪ್ರಳ್ಳಿ ಕಾಲಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.ಮೊದಲ ದಿನದ ನವರಾತಿ ಉತ್ಸವದ ಪ್ರಯುಕ್ತ ಉಪ್ರಳ್ಳಿ ಶ್ರೀಕಾಳಿಕಾಂಬಾ ದೇವರ ಸನ್ನಿಧಾನದಲ್ಲಿ ಜರುಗಿದ ಚಂಡಿಕಾ ಹೋಮವನ್ನು ದೇವಳದ ಆಡಳಿತ ಮೋಕ್ತೆಸರರಾದ ಚಂದ್ರಯ್ಯ ಆಚಾರ್ಯ ಕಳಿ ಅವರು ನೆರವೇರಿಸಿಕೊಟ್ಟರು.ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು,ಸದಸ್ಯರು,ಸಮಾಜ ಬಾಂಧವರು ಉಪಸ್ಥಿತರಿದ್ದರು.

ರಾಜ್ಯ ಮಟ್ಟದ ಕರೋಕೆ ಗಾಯನ ಸ್ಪರ್ಧೆ,ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಕುಂದಾಪುರ:ಸಂಗೀತ ಕೇಳುವುದರಿಂದ ಕಿವಿಗೆ ಇಂಪು ನೀಡುವುದರ ಜತೆಗೆ ದೇಹದಲ್ಲಿ ಖುಷಿಯ ಹಾರ್ಮೋನ್‍ಗಳು ಉತ್ಪತ್ತಿಯಾಗಿ ಮನಸ್ಸು ಲವಲವಿಕೆಯಿಂದ ಕೂಡಿರಲು ಸಹಕರಿಸುತ್ತದೆ.ಮನವು ಖಿನ್ನತೆಯಿಂದ ಕೂಡಿದ್ದಾಗ ಸಂಗೀತ ಕೇಳುವುದರಿಂದ ಒತ್ತಡ ನಿವಾರಣೆಯನ್ನು ಮಾಡಿಕೊಳ್ಳಬಹುದಾಗಿದೆ.ಸಂಗೀತಕ್ಕೆ ಮಾನಸಿಕ ಒತ್ತಡವನ್ನು ಹೊಗಲಾಡಿಸುವ ತಾಕತ್ತು ಇದೆ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ಕೆ ಹೇಳಿದರು.ಶ್ರೀದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ ಮಸ್ಕಿ-ನಾವುಂದ ವತಿಯಿಂದ ಹಿಂದು ಅಭ್ಯುದಯ ಶ್ರೀಮಾಂಗಲ್ಯ ಮಹಾಗಣಪತಿ ಮಂಟಪ ನಾವುಂದದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ನೂರಾರು ವರ್ಷಗಳ ಕಾಲದ […]

You cannot copy content of this page