ಗಂಗೊಳ್ಳಿ:ಚರ್ಮರೋಗ ತಪಾಸಣೆ,ಚಿಕಿತ್ಸಾ ಶಿಬಿರ ಉದ್ಘಾಟನೆ

ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕುಷ್ಠ ರೋಗ ನಿಯಂತ್ರಣ ಘಟಕ,ರೋಟರಿ ಕ್ಲಬ್ ಗಂಗೊಳ್ಳಿ,ಗ್ರಾಮ ಪಂಚಾಯತ್ ಗಂಗೊಳ್ಳಿ,ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಅವರ ಜಂಟಿ ಆಶ್ರಯದಲ್ಲಿ ಚರ್ಮರೋಗ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆಯಿತು.ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಣಿಪಾಲ […]

ಬೆಂಗಳೂರು:ಮೀನುಗಾರರ ಮುಖಂಡರ ವಿಶೇಷ ಸಭೆ

ಕುಂದಾಪುರ:ಬಂದರು ಮತ್ತು ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಭಾಗದ ಮೀನುಗಾರರ ಮುಖಂಡರ ವಿಶೇಷ ಸಭೆಯು ಬೆಂಗಳೂರು ಕುಮಾರ ಕೃಪಾದಲ್ಲಿ ಗುರುವಾರ ನಡೆಯಿತು.ಗಂಗೊಳ್ಳಿ ಬಂದರು ಜಟ್ಟಿ ದುರಸ್ತಿ ಹಾಗೂ ಮಹಿಳಾ ಮೀನುಗಾರರ ವಿಶ್ರಾಂತಿ ಕೊಠಡಿ ನಿರ್ಮಾಣದ ಕುರಿತು ಮತ್ತು ಹರಾಜು ಪ್ರಾಂಗಣದ ಅಭಿವೃದ್ಧಿ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲಾಯಿತು.ನಾಡದೋಣಿ ಮೀನುಗಾರರ ಸೀಮೆಎಣ್ಣೆ ಸಬ್ಸಿಡಿ ಹೆಚ್ಚಳಕ್ಕೆ ಮನವಿಯನ್ನು ನೀಡಲಾಯಿತು.ಮೀನುಗಾರರ ನಾನಾ ಸಮಸ್ಯೆಗಳನ್ನು ಚರ್ಚಿಸಲಾಯಿತು.ಈ ಸಂದರ್ಭ ಉಡುಪಿ ಶಾಸಕ ಯಶಪಾಲ್ ಸುವರ್ಣ,ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಗಳು,ನಿರ್ದೇಶಕರು,ಗಂಗೊಳ್ಳಿ ಪ್ರಾಥಮಿಕ ಮೀನುಗಾರ […]

ಬಾಡಿ ಬಿಲ್ಡಿಂಗ್ ಸ್ಪರ್ಧೆ: ಸೋಮಶೇಖರ್ ಖಾರ್ವಿಗೆ ಪ್ರಥಮ ಸ್ಥಾನ

ಕುಂದಾಪುರ:ದಸರಾ ಹಬ್ಬದ ಪ್ರಯುಕ್ತ ಮೈಸೂರು ನಲ್ಲಿ ನಡೆದ ಬಾಡಿ ಬಿಲ್ಡಿಂಗ್ ಕಾಂಪಿಟೇಷನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ಮಿಸ್ಟರ್ ಸೋಮಶೇಖರ್ ಖಾರ್ವಿ ಅವರು 65ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

You cannot copy content of this page