ಗಂಗೊಳ್ಳಿ:ಪೋಷಣ್ ಅಭಿಯಾನ,ಸೀಮಂತ ಕಾರ್ಯಕ್ರಮ

ಕುಂದಾಪುರ:ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಡುಪಿ,ಶೀಶು ಅಬಿವೃದ್ಧಿ ಯೋಜನೆ ಕುಂದಾಪುರ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ವತಿಯಿಂದ ಪೋಷಣ್ ಅಭಿಯಾನ ಮತ್ತು ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ದಾಕುಹಿತ್ಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಬಿ.ಎಸ್ ರತ್ನಾಕರ ಖಾರ್ವಿ,ಉಪಾಧ್ಯಕ್ಷ ಸಂಗೀತಾ ಸಂತೋಷ್ ಕೋಡಿಕಾರ್,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಜಯಂತಿ ಖಾರ್ವಿ,ಮುಖ್ಯ ಶಿಕ್ಷಕಿ ಚಂದ್ರಕಲಾ,ಸಹ ಶಿಕ್ಷಕಿ ಪ್ರೇಮಲತಾ,ಗೌರವ ಶಿಕ್ಷಕಿ ಪಲ್ಲವಿ,ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್,ಸಹಾಯಕಿ ಗೌರಿ ಖಾರ್ವಿ,ಅಡುಗೆ ಸಹಾಯಕಿ ಗುಲಾಬಿ,ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅರವಿಂದ ಪೂಜಾರಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬೈಂದೂರು ವಿಧಾನಸಭೆ ಕ್ಷೇತ್ರದ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಅರವಿಂದ ಪೂಜಾರಿ ಪಡುಕೋಣೆ ಅವರನ್ನು ಆಯ್ಕೆ ಮಾಡಿ ಕೆಪಿಪಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ನೀಡಿದ್ದಾರೆ.ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಅರವಿಂದ ಪೂಜಾರಿ ಅವರು ಈ ಹಿಂದೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು.

ಹೆಮ್ಮಾಡಿ:ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಎರಡನೇ ದಿನಕ್ಕೆ

ಕುಂದಾಪುರ:ಬೈಂದೂರು ಮತ್ತು ಕುಂದಾಪುರ ತಾಲೂಕು ಲಾರಿ ಮತ್ತು ಟೆಂಪೆÇ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ತಾಲೂಕಿನ ಭಾಗಗಳಲ್ಲಿ ಲಾರಿಗಳ ಓಡಾಟ ಸಂಪೂರ್ಣ ಸ್ತಬ್ಧಗೊಂಡಿದೆ.ಅನಿರ್ದಿಷ್ಟಾವಧಿಗಳ ವರೆಗೆ ಕೈಗೊಂಡಿದ್ದ ಮುಷ್ಕರದ ಅಂಗವಾಗಿ ಲಾರಿ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಹೆಮ್ಮಾಡಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಗುರುವಾರವೂ ನೂರಾರು ಲಾರಿಗಳು ಹೆಮ್ಮಾಡಿ ಹೆದ್ದಾರಿ ರಸ್ತೆ ಬದಿಯಲ್ಲಿ ಠಿಕಾಣಿ […]

You cannot copy content of this page