ಹಾಲಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಕುಂದುಕೊರತೆಗಳ ಸಭೆ

ಕುಂದಾಪುರ:ಹಾಲಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಾಲಾಡಿ, ಮೊಳಹಳ್ಳಿ,ಹಾರ್ದಳ್ಳಿ- ಮಂಡಳ್ಳಿ,ಹೊಂಬಾಡಿ-ಮಂಡಾಡಿ,ಹೆಂಗವಳ್ಳಿ ಅಮಾಸೆಬೈಲ್ ಪಂಚಾಯತ್ ಗಳಿಗೆ ಸಂಭಂದಿಸಿದಂತೆ ಕುಂದುಕೊರತೆ ಸಭೆ ಹಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.15ನೇ ಹಣಕಾಸು,ನರೇಗಾ,ಜೆಎಂಜೆ ಸೇರಿದಂತೆ ವಿವಿಧ ಇಲಾಖೆಗಳ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ತಮ್ಮ ಇಲಾಖೆಯಡಿ ದೊರಕುವ ಸವಲತ್ತುಗಳ ಕುರಿತು ಮಾಹಿತಿ […]

ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಕುಂದಾಪುರ:ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಿಭಾಗದ ಪೆÇೀಷಕರ ಸಭೆ ನಡೆಯಿತು.ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಬಗ್ಗೆ ತಿಳಸಿದರು.ಸಂಪನ್ಮೂಲ ವ್ಯಕ್ತಿ ಸುನಿಲ್ ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ ಸ್ವಾಗತಿಸಿದರು.ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿ,ವಂದಿಸಿದರು.

ಕಡಲಿನ ತೆರೆಯಲ್ಲಿ ಸಿಲುಕಿದ ಕಡಲಾಮೆ ರಕ್ಷಣೆ

ಕುಂದಾಪುರ:ಕೈ,ಕಾಲು ಮುರಿತಕ್ಕೆ ಒಳಗಾಗಿ ಮರವಂತೆ ಬೀಚ್ ಬಳಿ ಕಡಲಿನ ತೆರೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಬಿಳಿ ಮೈ ಬಣ್ಣವನ್ನು ಹೊಂದಿರುವ ಬೃಹತ್ ಗಾತ್ರದ ಕಡಲಾಮೆಯನ್ನು ಜೀವ ರಕ್ಷಕ ತಂಡದ ಸದಸ್ಯರು ಕಡಲಿಗೆ ಇಳಿದು ರಕ್ಷಣೆ ಮಾಡಿ ಸಂಬಂಧಿಸಿದ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.ಮುಳುಗು ತಜ್ಞ ದಿನೇಶ್ ಖಾರ್ವಿ,ವೆಂಕಟೇಶ ಖಾರ್ವಿ,ಸಚಿನ್ ಖಾರ್ವಿ,ವಿಶ್ವನಾಥ ಖಾರ್ವಿ,ಸಚಿನ್,ಸಂತೋಷ ಖಾರ್ವಿ,ಶರತ್ ಖಾರ್ವಿ,ಆದರ್ಶ ಖಾರ್ವಿ,ಧನುಷ್ ಕಾರ್ಯಾಚರಣೆಯಲ್ಲಿ ಭಾಗಿ ಆಗಿದ್ದರು.

You cannot copy content of this page