ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಪದಾಧಿಕಾರಿಗಳ ಆಯ್ಕೆ

ಬೈಂದೂರು:ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಅದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ದೇವಳದ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಹಿಳಾ ಸಮಿತಿ ನೂತನ ಅಧ್ಯಕ್ಷರಾಗಿ ಶೈಲಾ ಆಚಾರ್ಯ ಉಪ್ಪುಂದ ಹಾಗೂ ಕಾರ್ಯದರ್ಶಿಯಾಗಿ ಜ್ಯೋತಿ ಆಚಾರ್ಯ ಗುಜ್ಜಾಡಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸುಮತಿ ಆಚಾರ್ಯ ಕಿರಿಮಂಜೇಶ್ವರ,ಇಂದಿರಾ ಆಚಾರ್ಯ ನೀರ್ಕರೆ,ಶ್ರೀಮತಿ ಆಚಾರ್ಯ ಮರವಂತೆ,ಸವಿತ ಆಚಾರ್ಯ ಬಾರಂದಾಡಿ,ಶ್ರೀಮತಿ ಆಚಾರ್ಯ ಮರವಂತೆ,ಗಾಯಿತ್ರಿ ಆಚಾರ್ಯ ಮರವಂತೆ ಆಯ್ಕೆಯಾದರು.ಜೊತೆ ಕಾರ್ಯದರ್ಶಿಯಾಗಿ ಶರಾವತಿ ಆಚಾರ್ಯ ಪಡುಕೋಣೆ,ಸುಜಾತ ಆಚಾರ್ಯ ಕಟ್‍ಬೇಲ್ತೂರು,ಅನುಷಾ ಆಚಾರ್ಯ ಮಾಣಿಕೊಳಲು,ವಿಜಯ ಗಣೇಶ ಪುರೋಹಿತರು,ಕ್ರೀಡಾ ಕಾರ್ಯದರ್ಶಿಯಾಗಿ […]

ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಾಟಾ(NATA) ತರಗತಿಯ ಉದ್ಘಾಟನೆ,ಮಾಹಿತಿ ಕಾರ್ಯಕ್ರಮ.

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿರುವ ನಾಟಾ(NATA) ಪರೀಕ್ಷೆಯ ತರಬೇತಿಯ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಅಗತ್ಯತೆಯ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಚಂದ್ರಶೇಖರ್ ರವರು ನಾಟಾ(NATA) ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು,ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.ಉಪನ್ಯಾಸಕ ಅಭಿಜಿತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಗಂಗೊಳ್ಳಿ:ಅಷ್ಟೋತರ ಸಹಸ್ರ ನಾಳಿಕೇರ ಮಹಾಗಣಯಾಗ

ಕುಂದಾಪುರ:ಶ್ರೀಗಣೇಶೋತ್ಸವ ಸಮಿತಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಗಂಗೊಳ್ಳಿ ಅದರ 31ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಗಣಪತಿ ದೇವರಿಗೆ 1008 ಕಾಯಿಗಳ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾ ಗಣಯಾಗ ಮತ್ತು ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಹಾಗೂ ಕುಣಿತ ಭಜನಾ ಕಾರ್ಯಕ್ರಮ ಗುರುವಾರ ನಡೆಯಿತು.

You cannot copy content of this page