ರೋಟರ್ಯಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ

ಕುಂದಾಪುರ:ಗಂಗೊಳ್ಳಿ ರೋಟರಿ ಕ್ಲಬ್ ಪ್ರಾಯೋಜಿತ ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಗಂಗೊಳ್ಳಿ ಸ.ವಿ.ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆಯಿತು.ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಕವಿತಾ ಎಂ.ಸಿ. ಕಾರ್ಯಕ್ರಮ ಉದ್ಘಾಟಿಸಿದರು.ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ,ಝೋನಲ್ ರೋಟರ್ಯಾಕ್ಟ್ ಕೋ-ಆರ್ಡಿನೇಟರ್ ಸುಗುಣಾ ಆರ್.ಕೆ ಮತ್ತು ರೋಟರ್ಯಾಕ್ಟ್ ಪದಾಧಿಕಾರಿಗಳು,ನಿರ್ಗಮಿತ ಅಧ್ಯಕ್ಷೆ ಶ್ರೇಯಾ ಎಸ್ ಮತ್ತು ಕಾರ್ಯದರ್ಶಿ ಸುಹಾನಾ,ಸದಸ್ಯರು ಉಪಸ್ಥಿತರಿದ್ದರು.ರೋಟರ್ಯಾಕ್ಟ್ ಕ್ಲಬಿನ ನೂತನ ಅಧ್ಯಕ್ಷೆಯಾಗಿ ಸಿಂಚನಾ ಮತ್ತು ಕಾರ್ಯದರ್ಶಿಯಾಗಿ ಕ್ಷಮಾ ಪದಗ್ರಹಣ […]

ಸುಗುಣ ಆರ್.ಕೆ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕ ಕೊಡುಗೆ

ಕುಂದಾಪುರ:ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಪಿ.ಯು.ಸಿ ವಿಭಾಗದ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕಗಳನ್ನು ಕ್ಲಬ್ಬಿನ ಅಧ್ಯಕ್ಷ ಎಂ.ನಾಗೇಂದ್ರ ಪೈ ವಿತರಿಸಿದರು.ಕ್ಲಬ್ಬಿನ ಸದಸ್ಯರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗಂಗೊಳ್ಳಿ ರೋಟರಿ ಕ್ಲಬ್ ಪರವಾಗಿ ಝೋನಲ್ ರೋಟರ್ಯಾಕ್ಟ್ ಕೋ-ಆರ್ಡಿನೇಟರ್ ಸುಗುಣ ಆರ್.ಕೆ. ಅವರು ಸುಮಾರು 10 ಸಾವಿರ ರೂ. ಮೌಲ್ಯದ ಸಂಸ್ಕೃತ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ:ಅಣ್ಣನ ಸಾವು

ಮಂಗಳೂರು:ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ.ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು,ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

You cannot copy content of this page