ತೊಂಬಟ್ಟು: ಶ್ವಾನ ಪ್ರೀತಿಗೆ ಜನರು ಪುಲ್ ಖುಷ್

ಕುಂದಾಪುರ:ಕಳೆದ ಎಂಟು ದಿನಗಳ ಹಿಂದೆ ನಾಪತ್ತೆಯಾಗಿ ಸುರಕ್ಷಿತವಾಗಿ ಮರಳಿ ಮನೆಗೆ ಬಂದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ವಿವೇಕಾನಂದ ಹಾಗೂ ಜೊತೆಗಿದ್ದ ಶ್ವಾನ ನನ್ನು ಊರವರು ಮೆರವಣಿಗೆ ಮೂಲಕ ಕರೆತಂದು ಖುಷಿ ಪಟ್ಟರು.ದಟ್ಟ ಕಾಡಿನಲ್ಲಿ ಕಣ್ಮರೆಯಾಗಿ ಎಂಟು ದಿನಗಳ ನಂತರ ಸುರಕ್ಷಿತವಾಗಿ ವಿವೇಕಾನಂದ ಮನೆಗೆ ಮರಳಿದ್ದರಿಂದಊರ ದೇವರಿಗೆ ಸೋಮವಾರ ಹರಿಕೆ ಸಲ್ಲಿಸಲಾಯಿತು ಈ ಸಂದರ್ಭ ಗ್ರಾಮಸ್ಥರು ಉಪಸ್ಥಿತರಿದ್ದರು.

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ

ಕುಂದಾಪುರ:ಸದಸ್ಯರ ಹೆಚ್ಚಿನ ಪ್ರೆÇೀತ್ಸಾಹದಿಂದ ಪ್ರತಿವರ್ಷ ಠೇವಣಿ ಸಂಗ್ರಹಣೆ ಮತ್ತು ಸಾಲ ವಸೂಲಾತಿಯಲ್ಲಿ ಗುರಿಯನ್ನು ಸಾಧಿಸಲಾಗುತ್ತಿದೆ.2022-23ನೇ ಸಾಲಿನಲ್ಲಿ 114 ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 40.99 ಲಕ್ಷ ರೂ. ನಿವ್ವಳ ಲಾಭ ಹೊಂದಿದೆ.ಲಾಭಾಂಶದಲ್ಲಿ ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.ಗಂಗೊಳ್ಳಿ ಶ್ರೀರಾಮ ಮಂದಿರದಲ್ಲಿ ನಡೆದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿರ್ದೇಶಕರಾದ ಕೆ.ಮಾಧವ […]

ನಾಡ:ದಲಿತ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕುಂದಾಪುರ:ಇತ್ತೀಚಿನ ದಿನಗಳಲ್ಲಿ ಸಂಘಟನೆಗಳಿಗೆ ಬರುವ ದೂರುಗಳು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ್ದು ಆಗಿದ್ದು ಸಮಾಜದಲ್ಲಿ ನಮ್ಮನ್ನು ತುಳಿಯುವಂತಹ ಸಂಸ್ಕೃತಿ ಇನ್ನೂ ಕೂಡ ಮುಂದುವರೆದಿರುವುದು ನಮ್ಮ ಯುವ ಪೀಳಿಗೆ ಮೇಲೆ ಬಹಳಷ್ಟು ಪರಿಣಾಮ ಬೀರಿದೆ.ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿದಂತೆ ನಾಡದಲ್ಲಿ ದಲಿದತ ಹುಡುಗರ ಮೇಲೆ ಹಲ್ಲೆ ಮಾಡಿದ ಏಳು ಆರೋಪಿಗಳನ್ನು ಕೂಡಲೆ ಬಂಧಿಸಲು ಕ್ರಮ ಕೈಗೊಳ್ಳಬೇಕೆಂದು ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನ ಮನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.ಬೈಂದೂರು ತಾಲೂಕಿನ ನಾಡಗುಡ್ಡೆಅಂಗಡಿಯಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ದಲಿತ ಹುಡುಗರ ಮೇಲೆ ಹಲ್ಲೆ […]

You cannot copy content of this page