ಗುಜ್ಜಾಡಿ ಗ್ರಾಮ ಪಂಚಾಯತ್‍ನ,ಪ್ರಥಮ ಸುತ್ತಿನ ಗ್ರಾಮಸಭೆ

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆಯಿತು.ಗ್ರಾ.ಪಂ ಅಧ್ಯಕ್ಷೆ ಯಮುನಾ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು.ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ ಬೈಂದೂರು ರಾಜ್‍ಕುಮಾರ್ ನೋಡಲ್ ಅಧಿಕಾರಿಯಾಗಿ ಭಾಗವಹಿಸಿ ಗ್ರಾಮ ಸಭೆಯನ್ನುದ್ದೆಶೀಸಿ ಮಾತನಾಡಿ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯ ಬೇಕಾದರೆ ಗ್ರಾಮಸ್ಥರ ಪಾತ್ರ ಬಹುಮುಖ್ಯವಾಗಿರುತ್ತದೆ ಎಂದು ಹೇಳಿದರು.ಗ್ರಾಮ ಪಂಚಾಯತ್‍ನಲ್ಲಿ ಕೈ ಗೊಂಡ ವಿವಿಧ ಕಾಮಗಾರಿ,ಜನರ ಬೇಡಿಕೆಗಳನ್ನು ಸಭೆಯಲ್ಲಿ ಓದಿ ಹೇಳಲಾಯಿತು.ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಸಾರ್ವಜನಿಕರ ಬೇಡಿಕೆ […]

ಚಂದ್ರಯಾನ-3 ಯಶಸ್ವಿ ಉಡಾವಣೆ,ವಿಜ್ಞಾನಿಗಳು ಹರ್ಷ

ಬೆಂಗಳೂರು:ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ಗಗನ ನೌಕೆ ಉಡಾವಣೆ ಯಶಸ್ವಿಯಾಗಿದ್ದು ವಿಜ್ಞಾನಿಗಳು ಹರ್ಷಚಿತ್ತರಾಗಿದ್ದಾರೆ.ಕೋಟಿ,ಕೋಟಿ ಭಾರತೀಯರ ಶುಭಹಾರೈಕೆ ಫಲಿಸಿದೆ.ಗಗನ ನೌಕೆಯನ್ನು ಹೊತ್ತ ಎಲ್‍ವಿಎಂ3 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ನಭಕ್ಕೆ ಶುಕ್ರವಾರ ಮಧ್ಯಾಹ್ನ ಚಿಮ್ಮಿದೆ.ಯೋಜನೆಗೆ ಯಶಸ್ಸು ಕೋರಿ ಇಸ್ರೋ ವಿಜ್ಞಾನಿಗಳು ತಿರುಮಲ ತಿಮ್ಮಪ್ಪ ದೇಗುಲದಲ್ಲಿ ಗುರುವಾರ ವಿಶೇಷವಾದ ಪೂಜೆಯನ್ನು ಸಲ್ಲಿಸಿದ್ದರು.

ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಪಿಕಪ್ ವಾಹನ: ಮಹಿಳೆ ಗಂಭೀರ

ಮಂಗಳೂರು:ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದಿದ್ದ ಪರಿಣಾಮ ಮನೆ ಜಖಂಗೊಂಡಿದ್ದು, ಮನೆಯೊಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ-ಸಾರಡ್ಕ ಕೂರೇಲು ಎಂಬಲ್ಲಿ ನಡೆದಿದೆ.ಕೂರೇಲು ಮಧ್ಯದ ಅಂಗಡಿಯ ಸಮೀಪ ಹಾದು ಹೋಗಿರುವ ರಸ್ತೆಯ ಕೆಳಗಿರುವ ಮನೆಯೊಂದರ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಬಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ.ಮನೆಯಲ್ಲಿರುವ ಮಹಿಳೆ ಮಲಗಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ,ಅಪಘಾತದಲ್ಲಿ ಗಾಯಗೊಂಡ ಮಹಿಳೆ ಗಂಭೀರ ಪರಿಸ್ಥಿಯಲಿದ್ದಾರೆ. ವಿಟ್ಲ ಪೊಲೀಸರು,ತುರ್ತು ಸೇವಾ ವಾಹನ […]

You cannot copy content of this page