ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ
ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ ಶೇ.15ರಷ್ಟು ಪ್ರಗತಿಯನ್ನು ಸಾಧಿಸಿದೆ.ಪ್ರಸ್ತುತ ವರದಿ ಸಾಲಿನಲ್ಲಿ ರೂ.68,00,561 ಲಾಭ ಗಳಿಸಲಾಗಿದೆ.ಶೇ.11 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹೇಳಿದರು.ಆಲೂರು ಶ್ರೀಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ […]























































































































































































































































































































































































































































































































































































































































































































































































































































































































































































































































































































































































































































































































































































































































































