ಕಟ್‌ಬೇಲ್ತೂರು:ಪಾಳು ಬಾವಿಗೆ ಬಿದ್ದ ಚಿರತೆ ರಕ್ಷಣೆ

ಕುಂದಾಪುರ:ಕಟ್‌ಬೇಲ್ತೂರು ಗ್ರಾಮದ ಸುಳ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಇರುವ ಸುಳ್ಸೆ ಬಾಬು ಪೂಜಾರಿ ಎಂಬುವವರ ತೋಟದಲ್ಲಿರುವ ಆವರಣವಿಲ್ಲದ ಪಾಳು ಬಾವಿಗೆ ಬಿದ್ದ ಚಿರತೆಯನ್ನು ಶನಿವಾರ ರಕ್ಷಿಸಲಾಗಿದೆ.ಆಹಾರವನ್ನು ಹುಡುಕಿಕೊಂಡು ಜನವಸತಿ ಪ್ರದೇಶದ ಕಡೆಗೆ ಬಂದಿರುವ ಅಂದಾಜು ೩ ವರ್ಷ ಪ್ರಾಯದ ಗಂಡು ಚಿರತೆಯೊಂದು ರಾತ್ರಿ ಸಮಯದಲ್ಲಿ ಆವರಣವಿಲ್ಲದ ಪಾಳು ಬಿದ್ದ ಬಾವಿಗೆ ಬಿದ್ದಿದೆ.ಬೆಳಗಿನ ಸಮಯದಲ್ಲಿ ಪ್ರಾಣಿಯೊಂದು ಕೂಗುತ್ತಿರುವ ಶಬ್ಧವನ್ನು ಗಮನಿಸಿದ ಬಾಬು ಪೂಜಾರಿ ಅವರು ಮನೆ ಹಿಂದುಗಡೆ ಇರುವ ತೋಟದಲ್ಲಿರುವ ಬಾವಿಯನ್ನು ಇಣುಕಿ ನೋಡಿದಾಗ ಚಿರತೆ […]

ಉಪ್ಪುಂದ: ಸತೀಶ್ ಕೊಠಾರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ಪ್ರದಾನ

ಬೈಂದೂರು:JCI ಉಪ್ಪುಂದ ದಿಗ್ವಿಜಯ 2023 19ನೇ JC ಸಪ್ತಾಹ ಏಳನೇ ದಿನದ ಸಮಾರೋಪ ಸಮಾರಂಭದಲ್ಲಿ ಸತೀಶ್ ಕೊಠಾರಿ ಅವರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸತೀಶ್ ಕೊಠಾರಿ ಅವರುಪ್ರಾಥಮಿಕ ಶಿಕ್ಷಣವಾದ 5ನೇ ತರಗತಿಯನ್ನು ಅರ್ಧಕ್ಕೆ ಮುಗಿಸಿ,ಮನೆಯ ಬಡತನವನ್ನು ನೀಗಿಸಬೇಕೆಂಬ ಛಲದೊಂದಿಗೆ ಬೆಂಗಳೂರಿಗೆ ತೆರಳುತ್ತಾರೆ.ಸಣ್ಣ ಪುಟ್ಟ ಹೋಟೆಲ್,ಕ್ಯಾಂಟೀನ್ ಗಳಲ್ಲಿ ಕ್ಲೀನರ್ ಆಗಿ,ವೆಸ್ಟರ್ ಆಗಿ ಕೆಲಸ ಮಾಡುತ್ತಾ ತನ್ನ ಪ್ರಾರಂಭಿಕ ದುಡಿಮೆಯನ್ನು ಆರಂಭಿಸುತ್ತಾರೆ.ಎಷ್ಟೇ ದುಡಿದರೂ ಮನೆಯ ಬಡತನದ ಪರಿಸ್ಥಿತಿ ಸುಧಾರಿಸದೇ ಇರುವುದನ್ನು ಮನಗಂಡು ಇನ್ನೂ ಹೆಚ್ಚಿನ ದುಡಿಮೆಗಾಗಿ […]

ಹೆಮ್ಮಾಡಿ:ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಶುಕ್ರವಾರ ನಡೆಯಿತು.ನಿವೃತ್ತ ಮುಖ್ಯೋಪಾಧ್ಯಾಯ ಶಂಕರ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ದೇವಪ್ಪ ಪೂಜಾರಿ ಉದ್ಘಾಟಿಸಿ ಪೋಷಣ್ ಅಭಿಯಾನ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.ಸಮುದಾಯ ಆರೋಗ್ಯ ಕೇಂದ್ರ ಹೆಮ್ಮಾಡಿ ವೈದ್ಯರಾದ ವತ್ಸಲ,ಯೋಗ ಶಿಕ್ಷಕಿ ಸುಜಾತ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಪ್ರಾಸ್ತಾವಿಕವಾಗಿ ಮಾತನಾಡಿ,ಸ್ವಾಗತಿಸಿದರು.ಶಿಕ್ಷಕಿ ಸುಶೀಲ ನಿರೂಪಿಸಿದರು.ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು.

You cannot copy content of this page