ಕಾಂಗ್ರೆಸ್ ಸರಕಾರ ತೆಗೆದುಕೊಂಡ ನಿಲುವಿಗೆ,ಪ್ರತಿ ಧ್ವನಿ ಸುವಂತಹ ಕಾರ್ಯಗಳು ರಾಜ್ಯದಲ್ಲಿ ನಡೆಯುತ್ತಿದೆ

ಸಾಗರ:ಕಾಂಗ್ರೆಸ್ ಸರಕಾರ ತೆಗೆದುಕೊಂಡ ನಿಲುವಿಗೆ ಪ್ರತಿ ಧ್ವನಿ ಸುವಂತಹ ಕಾರ್ಯಗಳು ರಾಜ್ಯದಲ್ಲಿ ನಡೆಯುತ್ತಿದೆ.ಜೈನಮುನಿಗಳು ಮತ್ತು ಮೈಸೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಿಂದ ಇದು ಸಾಬೀತಾಗಿದೆ,ಪಠ್ಯದ ವಿಚಾರದಲ್ಲಿ,ಗೋಹತ್ಯೆ ಕಾಯ್ದೆ ಮತ್ತು ಮತಾಂತರ ಕಾಯ್ದೆಯನ್ನು ಹಿಂಪಡೆಯುವ ಬಗ್ಗೆ ಕ್ಯಾಬಿನೇಟ್‍ನಲ್ಲಿ ಚರ್ಚೆ ನಡೆದಿದೆ ಇವೆಲ್ಲಾ ಆಗುಂತಕರಿಗೆ ಪ್ರಚೋದನೆ ನೀಡುವಂತೆ ಇದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಉಡುಪಿ:ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಕುಂದಾಪುರ:ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕೂರ್ಮರಾವ್ ಅವರು ಸರಕಾರದ ಆದೇಶದ ಮೆರೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ಅವರು ನೇಮಕಗೊಂಡಿದ್ದಾರೆ.ಡಾ.ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು.ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಅವರು 2014ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾರಿ.

ಮರದ ಕಾಲು ಸಂಕಕ್ಕೆ ಮುಕ್ತಿ,ಸರಾಗ ಸಂಚಾರಕ್ಕೆ ಅನುಕೂಲ

ಕುಂದಾಪುರ:ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೆಪಾಲು –ಮುದ್ಗಮ್ಮಿ ಎಂಬಲ್ಲಿ ಇದ್ದ ಅಪಾಯಕಾರಿ ಮರದ ಕಾಲು ಸಂಕಕ್ಕೆ ಮುಕ್ತಿ ನೀಡಿ ನರೇಗಾ ಯೋಜನೆಯಡಿ ಹೊಸ ಕಾಲುಸಂಕವನ್ನು ನಿರ್ಮಾಣ ಮಾಡಲಾಗಿದೆ.ಸುಸಜ್ಜಿತವಾದ ಕಾಂಕ್ರಿಟ್ ಕಾಲು ಸಂಕ ನಿರ್ಮಾಣವಾಗಿರುವುದರಿಂದ ಅಲ್ಲಿನ ನಿವಾಸಿಗಳಿಗೆ ಸರಾಗವಾಗಿ ಸಂಚಾರ ಮಾಡಬಹುದಾಗಿದೆ.ಜಡ್ಕಲ್ ಕೊಡೆಪಾಲು –ಮುದ್ಗಮ್ಮಿ ಪರಿಸರದಲ್ಲಿ ಕಾಲು ಸಂಕ ನಿರ್ಮಾಣದಿಂದ ಶಾಲಾ ಮಕ್ಕಳಿಗೆ ಹಾಗೂ ಪರಿಸರದ ಸುಮಾರು 25 ಮನೆಗಳಿಗೆ ಅನುಕೂಲವಾಗಲಿದ್ದು ನಿವಾಸಿಗಳ ಮೊಗದಲ್ಲಿ ಮಂದಹಾಸ ಮೂಡಿದೆ.ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಅವರು ಸ್ಥಳಕ್ಕೆ ಭೇಟಿ […]

You cannot copy content of this page