ಗಂಗೊಳ್ಳಿ:ಸಾಕ್ಷರತೆ ವಿಚಾರ ಸಂಕಿರಣ ಕಾರ್ಯಕ್ರಮ
ಕುಂದಾಪುರ:ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಸಾಕ್ಷರತೆ ಕುರಿತು ವಿಶೇಷ ವಿಚಾರ ಸಂಕಿರಣ ಕಾರ್ಯಕ್ರಮ ಗಂಗೊಳ್ಳಿ ಎಸ್.ವಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಸಹಾಯಕ ರಾಜ್ಯಪಾಲ ಆರ್ಟಿಎನ್ ಪಿಎಚ್ಎಫ್ ಡಾ.ಸಂದೀಪ ಶೆಟ್ಟಿ ಉದ್ಘಾಟಿಸಿದರು.ಝೋನಲ್ ಲೆಫ್ಟಿನೆಂಟ್ ಆರ್ಟಿಎನ್ ಪ್ರದೀಪ್ ಯಡಿಯಾಲ್ ಶುಭಹಾರೈಸಿದರು.ವಲಯ ಸಂಯೋಜಕ ನಾರಾಯಣ್ ಇ ನಾಯ್ಕ್ ಸಾಕ್ಷರತೆಯ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು.ಶಿವಕುಮಾರ್ ಆಲಗೋಡು ಅವರು ಜೀವನದ ಮೌಲ್ಯಗಳು ಮತ್ತು ನೈತಿಕತೆ ಬಗ್ಗೆ ಮಾತನಾಡಿದರು.ಕ್ಲಬ್ಬಿನ ಅಧ್ಯಕ್ಷ […]























































































































































































































































































































































































































































































































































































































































































































































































































































































































































































































































































































































































































































































































































































































































































