ಎಂಎಲ್‌ಎ ಟಿಕೆಟ್ ಕೊಡಿಸುದಾಗಿ ವಂಚನೆ:ಚೈತ್ರಾ ಕುಂದಾಪುರ ಅರೆಸ್ಟ್

ಬೈಂದೂರು:2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ಸಮಾಜ ಸೇವಕ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿಯೊಬ್ಬರಿಗೆ ಬರೊಬ್ಬರಿ 7. ಕೋಟಿ.ರೂ ವಂಚನೆ ಮಾಡಿರುವ ಪ್ರಕರಣದಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಯ ಲಾಭಾಂಶವನ್ನು ಬಳಸಿಕೊಳ್ಳಲು ಮುಂದಾಗಿದ್ದ ಚೈತ್ರ ಕುಂದಾಪುರ ಮತ್ತು ತಂಡ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಸುಳ್ಳು ಭರವಸೆಗಳನ್ನು ನೀಡಿ ಬೈಂದೂರು ಕ್ಷೇತ್ರದ […]

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚೇತನ್ ಖಾರ್ವಿ , ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚೇತನ್ ಖಾರ್ವಿ , ಉತ್ತಮ ಪ್ರದರ್ಶನ ನೀಡುವುದರ ಮೂಲಕ ಮುಂದೆ ನಡೆಯುವ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಕ್ಕೆ ಆಯ್ಕೆ ಆಗಿದ್ದಾರೆ.

ಬಾಲಕರ ಥ್ರೋಬಾಲ್ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಮತ್ತು ಸರಕಾರಿ ಪ್ರೌಢಶಾಲೆ ತಲ್ಲೂರು ಅವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷದ ಒಳಗಿನ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.ಶಾಲೆಯ ವಿದ್ಯಾರ್ಥಿಗಳಾದ ತರುಣ್ ಖಾರ್ವಿ,ಯೋಗೇಶ್,ಪ್ರೀತೇಶ್,ಮೌನೇಶ್,ಗೌತಮ್,ಧನುಷ್, ಶೈಲೇಶ್,ದಿಶಾನ್,ಕಾರ್ತಿಕ್,ನಿಶಾಂತ್ ಹಾಗೂ ಧರಣೇಶ್ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿದ್ದರು.ಶಾಲೆಯ ದೈಹಿಕ ಶಿಕ್ಷಕ ಅಣ್ಣಪ್ಪ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.ಕಾರ್ತಿಕ್ ಖಾರ್ವಿ,ಹಿತೇಶ್ ಖಾರ್ವಿ,ಪ್ರಜ್ವಲ್ ಪಂಡಿತ್ ತರಬೇತಿ […]

You cannot copy content of this page