ಪಡುಕೋಣೆ:ನಾಟಿ ವೈದ್ಯ ಮಾಕ್ಷಿಮ್ ಒಲಿವೆರಾ ಗಿಡಮೂಲಿಕೆ ಔಷಧ ನೀಡಿಕೆ

ಕುಂದಾಪುರ:ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೋಣೆ ನಿವಾಸಿ ಮಾಕ್ಷಿಮ್ ಒಲಿವೆರಾ ಅವರು ಕಳೆದ 25 ವರ್ಷಗಳಿಂದ ನಾಟಿ ಔಷಧವನ್ನು ನೀಡುವುದರ ಮುಖೇನ ಸಾವಿರಾರು ಜನರನ್ನು ರೋಗ ಮುಕ್ತಗೊಳಿಸುವುದರ ಮೂಲಕ ವಿಶಿಷ್ಟವಾದ ಸಾಧನೆಗೆ ಪಾತ್ರರಾಗಿದ್ದಾರೆ ಅವರ ಸಮಾಜಿಕ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ.ನಾಟಿ ಔಷಧವನ್ನು ಕೊಡುತ್ತಿರುವ ತಮ್ಮ ತಂದೆಯೊಂದಿಗೆ ಕೂಡಿಕೊಂಡು ಮಾಕ್ಷಿಮ್ ಒಲಿವೆರಾ ಅವರು ತಮ್ಮ 20ನೇ ವಯಸ್ಸಿನಲ್ಲಿಯೇ ಪ್ರಕೃತಿಯಲ್ಲಿ ಸಿಗುವ ಔಷಧ ಗಿಡಗಳ ಮಾಹಿತಿಯನ್ನು ಪಡೆದುಕೊಂಡು ಕ್ರಮೇಣ ತಂದೆಯ ಕಾಲದ ನಂತರ ಸ್ವತಂತ್ರವಾಗಿ […]

ನಾವುಂದ:ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ಬೈಂದೂರು:ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ,ಉಡುಪಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ.ಬಾಲಕಿಯರ ವಾಲಿಬಾಲ್ ಪಂದ್ಯಾಟ ನಾವುಂದ ಕಾಲೇಜಿನಲ್ಲಿ ಶನಿವಾರ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು.ನಾವುಂದ ಪಂಚಾಯತಿ ಅಧ್ಯಕ್ಷ ನರಸಿಂಹ ದೇವಾಡಿಗ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾಲೇಜಿನ ಅಬಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರವೀಣ್ ಪೂಜಾರಿ,ಎಂಎ ಖಾದರ್,ನಿವೃತ್ತ ಶಿಕ್ಷಕ ಸೀತಾರಾಮಯ್ಯ,ಮೊಹಮ್ಮದ್ ಇಲಿಯಾಸ್,ತಾ.ಪಂ ಮಾಜಿ ಸದಸ್ಯ ಮಹೇಂದ್ರ […]

ಗಂಗೊಳ್ಳಿ:ಮುಳುಗು ತಜ್ಞ ದಿನೇಶ್ ಖಾರ್ವಿಗೆ ಸನ್ಮಾನ

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮುಳುಗು ತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್‍ಹೌಸ್ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಗಂಗೊಳ್ಳಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ ಹಾಗೂ ನಿರ್ದೇಶಕರು,ಸಿಬ್ಬಂದಿಗಳು,ಸದಸ್ಯರು ಉಪಸ್ಥಿತರಿದ್ದರು.

You cannot copy content of this page