ಲಂಚ ಸ್ವೀಕರಿಸುತ್ತಿದ್ದಾಗಲೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಂಚಾಯಿತಿ ಅಧಿಕಾರಿಗಳು

ಗಂಗೊಳ್ಳಿ:ವ್ಯಕ್ತಿಯೊಬ್ಬರಿಂದ ಲಂಚವನ್ನು ಸ್ವೀಕರಿಸುತ್ತಿದ್ದ ಸಮಯದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಲೆಕ್ಕಪರಿಶೋಧಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ಬುಧವಾರ ನಡೆದಿದೆ.ಆರೋಪಿತರಾದ ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹೆಚ್ ಹಾಗೂ ಎಸ್‍ಡಿಎ ಸಿಬ್ಬಂದಿ ಶೇಖರ್.ಜಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.ಪಂಚಾಯಿತಿ ಮೇಲೆ ನಡೆದ ಲೋಕಾಯುಕ್ತ ದಾಳಿಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.ಗಂಗೊಳ್ಳಿ ಗ್ರಾಮದ ನಿವಾಸಿ ಮೊಹಮ್ಮದ್ ಹನೀಫ್ ಅವರು ಸರ್ವೇ ನಂಬರ್ 108/13 […]

ರಾಘು ಟ್ರೋಫಿ-2025 ಉದ್ಘಾಟನೆ:ಯುವ ಮನಸ್ಸುಗಳು ಒಂದೇಡೆ ಸೇರಲು ಒಳ್ಳೆ ಅವಕಾಶ-ಶಾಸಕ ಗಂಟಿಹೊಳೆ ಅಭಿಮತ

ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ಮಾತನಾಡಿ,ಕ್ರೀಡೆ ಯಿಂದ ದೇಹವನ್ನು ದಂಡಿಸಲು ಒಳ್ಳೆ ಮಾರ್ಗವಾಗಿದೆ ಎಂದು ಅಭಿಪ್ರಾಯಪಟ್ಟರು. ಕುಂದಾಪುರ:ಕ್ರಿಕೆಟ್ ಪಂದ್ಯಾಕೂಟಗಳನ್ನು ಆಯೋಜನೆ ಮಾಡುವುದರಿಂದ ಯುವ ಮನಸ್ಸುಗಳು ಒಂದೇಡೆ ಸೇರುವಂತೆ ಮಾಡಲು ಅವಕಾಶವನ್ನು ಮಾಡಿಕೊಟ್ಟಂತೆ ಆಗುತ್ತದೆ.ಜತೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ಕೆಲಸ ಮಾಡಲು ಒಳ್ಳೆ ವೇದಿಕೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟುಹೊಳೆ ಹೇಳಿದರು.ಅಂಬಾ ಕ್ರಿಕೆಟರ್ಸ್ ಮುಳ್ಳಿಕಟ್ಟೆ ಹೊಸಾಡು ವತಿಯಿಂದ ಸೀತಾರಾಮ ಶೆಟ್ಟಿ ಕೇರಿಕೊಡ್ಲು ಅವರ ಸ್ಮರಣಾರ್ಥವಾಗಿ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ ರಾಘು ಟ್ರೋಫಿ-2025 ಉದ್ಘಾಟನಾ ಕಾರ್ಯಕ್ರಮದಲ್ಲಿ […]

ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆ:ಗಗನ್ ಭಟ್ ಗೆ ದ್ವಿತೀಯ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ವತಿಯಿಂದ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಗಗನ್ ಭಟ್ ದ್ವಿತೀಯ ಸ್ಥಾನಗಳಿಸಿದ್ದಾರೆ.ಅವರು ಗಣಪತಿ ಎಸ್ ಭಟ್ ಮತ್ತು ಶಿಕ್ಷಕಿ ಗಂಗಾ ಜಿ ಭಟ್ ದಂಪತಿಗಳ ಪುತ್ರ.

You cannot copy content of this page