ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಸಭೆ

ಕುಂದಾಪುರ:ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳ ಸಭೆ ಕೊಂಕಣ ಖಾರ್ವಿ ಸಭಾಭವನದಲ್ಲಿ ಗುರುವಾರ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ವೃತ್ತ ನಿರೀಕ್ಷ ಸವಿತ್ರಾ ತೆಜ್ ಮಾತನಾಡಿ,ಸಾರ್ವಜನಿಕವಾಗಿ ಆಚರಣೆಗೊಳ್ಳುವ ಗಣೇಶೋತ್ಸವ ಕಾರ್ಯಕ್ರಮದ ಬಗ್ಗೆ ಸರಕಾರದ ಮಾರ್ಗಸೂಚಿ ಮತ್ತು ಧ್ವನಿ ವರ್ಧಕ ಬಳಕೆ ಕುರಿತು ಮಾಹಿತಿ ನೀಡಿದರು.ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದರು.ಈ ಸಂದರ್ಭ ಗಂಗೊಳ್ಳಿ ಠಾಣೆ ಪಿಎಸ್‌ಐ ಹರೀಶ್ ಆರ್ ನಾಯ್ಕ್ ಮತ್ತು ತನಿಖೆ ಪಿಎಸ್‌ಐ ಬಸವರಾಜ್ ಉಪಸ್ಥಿತರಿದ್ದರು.ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು […]

ವಿಶೇಷ ಗ್ರಾಮ ಸಭೆ,ಕಾನೂನು ಮಾಹಿತಿ ಕಾರ್ಯಕ್ರಮ

ಕುಂದಾಪುರ:2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ ಗುಜ್ಜಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು.ಗುಜ್ಜಾಡಿ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು,ವಕೀಲರಾದ ಚಂದ್ರಕಾಂತ್ ನಾಯಕವಾಡಿ ಕಾನೂನು ಮಾಹಿತಿ ನೀಡಿದರು.ಪಂಚಾಯತ್ ಸದಸ್ಯರು,ನೋಡಲ್ ಅಧಿಕಾರಿ ರಾಜ್ ಕುಮಾರ್,ಸಮಾಜ ಕಲ್ಯಾಣ ಇಲಾಖೆ ಪ್ರಭಾ,ಪೊಲೀಸ್ ಇಲಾಖೆ ಸಿಬ್ಬಂದಿಗಳು,ಆಡಳಿತಾಧಿಕಾರಿ ಸೋಮಪ್ಪ,ಆರೋಗ್ಯ ಇಲಾಖೆ ಸಿಬ್ಬಂದಿಗಳು,ಪಂಚಾಯತ್ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾನೆಟ್ ಇಳಿಸುವಾಗ ಮೈಮೇಲೆ ಬಿದ್ದು:ಇಬ್ಬರು ದಾರುಣ ಸಾವು

ಉಡುಪಿ:ಮಲ್ಪೆ ತೊಟ್ಟಂ ಎಂಬಲ್ಲಿ ಲಾರಿಯಿಂದ ಗ್ರಾನೆಟ್ ಇಳಿಸುವಾಗ ಮೈಮೇಲೆ ಬಿದ್ದು ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರಾದ ಬಾಬುಲ್ಲ ಮತ್ತು ಭಾಸ್ಕರ ಎನ್ನುವ ವ್ಯಕ್ತಿಗಳಿಬ್ಬರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಈಶ್ವರ ಮಲ್ಪೆ ಮತ್ತು ತಂಡದವರು ಘಟನೆ ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

You cannot copy content of this page