ಉಪ್ಪುಂದ: ಸತೀಶ್ ಕೊಠಾರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ಪ್ರದಾನ
ಬೈಂದೂರು:JCI ಉಪ್ಪುಂದ ದಿಗ್ವಿಜಯ 2023 19ನೇ JC ಸಪ್ತಾಹ ಏಳನೇ ದಿನದ ಸಮಾರೋಪ ಸಮಾರಂಭದಲ್ಲಿ ಸತೀಶ್ ಕೊಠಾರಿ ಅವರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸತೀಶ್ ಕೊಠಾರಿ ಅವರುಪ್ರಾಥಮಿಕ ಶಿಕ್ಷಣವಾದ 5ನೇ ತರಗತಿಯನ್ನು ಅರ್ಧಕ್ಕೆ ಮುಗಿಸಿ,ಮನೆಯ ಬಡತನವನ್ನು ನೀಗಿಸಬೇಕೆಂಬ ಛಲದೊಂದಿಗೆ ಬೆಂಗಳೂರಿಗೆ ತೆರಳುತ್ತಾರೆ.ಸಣ್ಣ ಪುಟ್ಟ ಹೋಟೆಲ್,ಕ್ಯಾಂಟೀನ್ ಗಳಲ್ಲಿ ಕ್ಲೀನರ್ ಆಗಿ,ವೆಸ್ಟರ್ ಆಗಿ ಕೆಲಸ ಮಾಡುತ್ತಾ ತನ್ನ ಪ್ರಾರಂಭಿಕ ದುಡಿಮೆಯನ್ನು ಆರಂಭಿಸುತ್ತಾರೆ.ಎಷ್ಟೇ ದುಡಿದರೂ ಮನೆಯ ಬಡತನದ ಪರಿಸ್ಥಿತಿ ಸುಧಾರಿಸದೇ ಇರುವುದನ್ನು ಮನಗಂಡು ಇನ್ನೂ ಹೆಚ್ಚಿನ ದುಡಿಮೆಗಾಗಿ […]























































































































































































































































































































































































































































































































































































































































































































































































































































































































































































































































































































































































































































































































































































































































































