ಮಾದಕ ವಸ್ತು ಸೇವನೆಯಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಅಸ್ವಸ್ಥರಾಗುತ್ತಾರೆ
ಕುಂದಾಪುರ:ಕೆ.ಪಿ.ಎಸ್ ಕೋಟೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.ಎನ್.ಆರ್.ಆಚಾರ್ಯ ಆಸ್ಪತ್ರೆಯ ಖ್ಯಾತ ಮನೋವೈದ್ಯೆ ಮಹಿಮಾ ಆಚಾರ್ಯ ಮಾತನಾಡಿ, ಮಾದಕ ವಸ್ತು ಸೇವನೆಯಿಂದ ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ ಅಸ್ವಸ್ತರಾಗುವುದು ಮಾತ್ರವಲ್ಲದೆ ಕುಟುಂಬ,ಸಮಾಜ,ದೇಶಕ್ಕೆ ಮಾರಕರಾಗುತ್ತಾರೆ ಎಂದರು.ಕಾಲೇಜಿನ ಪ್ರಿನ್ಸಿಪಾಲ್ ಸುಶೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕ ಪ್ರವೀಣ್ ಸ್ವಾಗತಿಸಿದರು,ಗಣೇಶ್ ಹೆಬ್ಬಾರ್ ನಿರ್ವಹಿಸಿದರು, ಚಂದ್ರಕಲಾ ವಂದಿಸಿದರು.