ಸೆ.11 ರಂದು ಹೊಸಾಡು ಗ್ರಾಮ ಪಂಚಾಯತ್ ಜಮಾಬಂದಿ

ಕುಂದಾಪುರ:ಹೊಸಾಡು ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮ ಸೆ.11 ರಂದು ಸೋಮವಾರ ಪೂರ್ವಾಹ್ನ ಗಂಟೆ 10 ರಿಂದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.ತಾಲೂಕು ಪಂಚಾಯತ್ ಕುಂದಾಪುರ ವ್ಯವಸ್ಥಾಪಕರಾದ ರಾಮಚಂದ್ರ ಮಯ್ಯ ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ.

ಕ್ರಿಶ್ಚಿಯನ್ ಬಾಂಧವರಿಂದ ತೆನೆ ಹಬ್ಬ ಆಚರಣೆ

ಕುಂದಾಪುರ:ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್ ಮತ್ತು ತ್ರಾಸಿ ಇಗರ್ಜಿ ಹಾಗು ಪಡುಕೋಣೆ ಚರ್ಚ್,ತಲ್ಲೂರು ಚರ್ಚ್ ಸೇರಿದಂತೆ ನಾನಾ ಕಡೆಗಳಲ್ಲಿ ತೆನೆ ಹಬ್ಬ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.ಚರ್ಚಿನ ಧರ್ಮಗುರುಗಳು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು,ಕ್ರಿಶ್ಚಿಯನ್ ಬಾಂಧವರು ಚರ್ಚ್‍ಗೆ ಆಗಮಿಸಿ ಪ್ರಾರ್ಥನೆಯನ್ನು ಸಲ್ಲಿಸಿದರು.ಭಕ್ತರಿಗೆ ತೆನೆಯನ್ನು ವಿತರಿಸಲಾಯಿತು.

ಆಲೂರು:ನಿವೃತ್ತ ಸೈನಿಕ ದಿನೇಶ್ ಆಚಾರ್ಯಗೆ ಹುಟ್ಟೂರು ಗೌರವ

ಕುಂದಾಪುರ:ಭಾರತೀಯ ಭೂ ಸೇನೆಯಲ್ಲಿ ಸಿಪಾಯಿ ಹುದ್ದೆಗೆ ಸೇರಿ ಹವಾಲ್ದಾರರಾಗಿ ನಿವೃತ್ತಿ ಹೊಂದಿರುವ ಆಲೂರು ಗ್ರಾಮದ ನಿವಾಸಿ ದಿನೇಶ್ ಆಚಾರ್ಯ ಅವರನ್ನು ಅವರ ತಂದೆ ತಾಯಿಯೊಂದಿಗೆ ಆಲೂರು-ಹರ್ಕೂರು ಗ್ರಾಮಸ್ಥರ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಆಲೂರು ಗ್ರಾ.ಪಂ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ,ಮಾಜಿ ಉಪಾಧ್ಯಕ್ಷ ರವಿ ಶೆಟ್ಟಿ ಆಲೂರು ಮತ್ತು ಸದಸ್ಯರು,ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಂಜಯ್ಯ ಶೆಟ್ಟಿ,ಬಾಂಧವ್ಯ ಬಳಗದ ಸುಧಾಕರ ಪೂಜಾರಿ ಮತ್ತು ಸದಸ್ಯರು,ಸ್ಥಳೀಯರು,ಉಪಸ್ಥಿತರಿದ್ದರು.೨೧ ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ […]

You cannot copy content of this page