ಸೆ.15 ರಂದು ಗುಜ್ಜಾಡಿ ಪಂಚಾಯತ್‍ವಿಶೇಷ ಗ್ರಾಮ ಸಭೆ

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್‍ನ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ ಸೆ.15 ರಂದು ಶುಕ್ರವಾರ ಪೂರ್ವಾಹ್ನ ಗಂಟೆ 10.30 ಕ್ಕೆ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಗುಜ್ಜಾಡಿ ಶಾಲೆ:ಮುದ್ದು ಕೃಷ್ಣ,ಮುದ್ದು ರಾಧೆ ಸ್ಪರ್ಧೆ

ಕುಂದಾಪುರ:ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಗುಜ್ಜಾಡಿ ಶಾಲೆಯ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮುದ್ದು ಕೃಷ ಮುದ್ದು ರಾಧೆ ಸ್ಪರ್ಧೆ ನಡೆಯಿತು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಸಂಘದ ಗೌರವಾಧ್ಯಕ್ಷ ಪ್ರಕಾಶ ಎಂ ಪೂಜಾರಿ,ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ ಗುಜ್ಜಾಡಿ,ಮುಖ್ಯೋಪಾಧ್ಯಾಯರಾದ ಗಂಗಾಧರ ಭಂಟ್,ಕುಸುಮ,ವಸAತ ಮೇಸ್ತ,ಸಂಘದ ಖಜಾಂಚಿ ಕೃಷ್ಣ ಗುಜ್ಜಾಡಿ,ಜೊತೆ ಕಾರ್ಯದರ್ಶಿ ರಾಘವೇಂದ್ರ ಡಿ,ರವಿ ಗುಜ್ಜಾಡಿ ಉಪಸ್ಥಿತರಿದ್ದರು.ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಶಿಕ್ಷಕಿ ಸುನೀತಾ ಸ್ವಾಗತಿಸಿದರು.ಶಿಕ್ಷಕಿ […]

ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಮಹಾಸಭೆ

ಕುಂದಾಪುರ:ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ-ಗುಜ್ಜಾಡಿ ಅದರ 7ನೇ ವಾರ್ಷಿಕ ಮಹಾಸಭೆ ತ್ರಾಸಿ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಮಾತನಾಡಿ,ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡುವುದರ ಜತೆಗೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆದು ಕೊಳ್ಳಲು ಸಂಘದ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಕುರಿತು ಕ್ರೀಯಾ ಯೋಜನೆ ರೂಪಿಸಲಾಗಿದೆ ಎಂದರು.ಸಂಘದ ಉಪಾಧ್ಯಕ್ಷೆ ರತ್ನ ಟಿ ದೇವಾಡಿಗ,ನಿರ್ದೇಶಕರಾದ ವಿಜಯ ಬಿ,ಸುರೇಖಾ ಕಾನೋಜಿ,ಮಹಾಲಕ್ಷಿ,ಶಾಂತಾ,ರೇಖಾ ಖಾರ್ವಿ,ಲಲಿತಾ ಖಾರ್ವಿ,ಶ್ಯಾಮಲಾ ದೇವಿ,ಶಾಂತಿ ಖಾರ್ವಿ,ಸುನೀತಾ ಪೂಜಾರಿ,ಶಾಂತಾ ಮರಾಠಿ […]

You cannot copy content of this page