ಗಾಯನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಶಿಕ್ಷಕರ ಸಂಘ ಬೈಂದೂರು ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘ ಬೈಂದೂರು ವತಿಯಿಂದ ಗಾಯನೋತ್ಸವ ಕಾರ್ಯಕ್ರಮ ನಾವುಂದ ಸ್ಕಂದಾ ಹಾಲ್‍ನಲ್ಲಿ ನಡೆಯಿತು.ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕ್ಷೇತ್ರ ಶಿಕ್ಷಣಾಕಾರಿ ನಾಗೇಶ ಉದ್ಘಾಟಿಸಿದರು.ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಯಾನಂದ ಪಟಗಾರ್,ಸಮನ್ವಯಾಕಾರಿ ಮಂಜುನಾಥ ನಾಯ್ಕ,ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ಮಾದವ ಬಿಲ್ಲವ,ದಯಾನಂದ ಬಳಗಾರ್ ಉಪಸ್ಥಿತರಿದ್ದರು.ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಸ್ವಾಗತಿಸಿದರು.ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಂಘಟನಾ […]

ಆಲೂರು:-ವೈದ್ಯಕೀಯ ಚಿಕಿತ್ಸೆಗೆ,ಧನಸಹಾಯ ವಿತರಣೆ

ಕುಂದಾಪುರ:ನಿಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ನಿವಾಸಿ ಸುಮತಿ ದೇವಾಡಿಗ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಆಲೂರು-ಹರ್ಕೂರು ಗ್ರಾಮಸ್ಥರಿಂದ ಸಂಗ್ರಹಿಸಿದ 51,000.ರೂ ಅನ್ನು ಧನಸಹಾಯದ ರೂಪದಲ್ಲಿ ವಿತರಿಸಲಾಯಿತು.ಈ ಸದಂರ್ಭ ಗ್ರಾಮದ ಸಮಾನ ಮನಸ್ಕ ಸ್ವಯಂಸೇವಕರು ಉಪಸ್ಥಿತರಿದ್ದರು.

ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು-ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಾಗಾರ

ಕುಂದಾಪುರ:ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಾಗಾರ ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ನಡೆಯಿತು.ಹೆಮ್ಮಾಡಿ ಜನತಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು,ಪ್ರಿನ್ಸಿಪಾಲ್ ಗಣೇಶ್ ಪುತ್ರನ್ ಅಧ್ಯಕ್ಷತೆಯನ್ನು ವಹಿಸಿದ್ದರು.ಲಯನ್ಸ್ ಕ್ಲಬ್ ಕುಂದಾಪುರ ಕೊಸ್ಟಲ್ ಅಧ್ಯಕ್ಷ ವಸಂತರಾಜ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ ವೃತ್ತಿ ಮಾರ್ಗದರ್ಶನದ ಅಗತ್ಯತೆ ಬಗ್ಗೆ ಮಾಹಿತಿ ನೀಡಿದರು.ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಜಿಲ್ಲೆ 317 ರವಿರಾಜ್ […]

You cannot copy content of this page