ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ,ಗುರು ನಮನ ಕಾರ್ಯಕ್ರಮ
ಕುಂದಾಪುರ:ಶಿಕ್ಷಣ ಮತ್ತು ಸಂಸ್ಕಾರದ ಕುರಿತಾಗಿ ಸಾಕಷ್ಟು ಸ್ವಾರಸ್ಯಕರವಾಗಿರುವ ವಿಚಾರಗಳನ್ನು ಮನ ಮುಟ್ಟುವಂತೆ ವಿದ್ಯಾರ್ಥಿಗಳಿಗೆ ಜನತಾ ಕಾಲೇಜು ಶಿಕ್ಷಣ ಸಂಸ್ಥೆ ಬೋಧನೆ ಮಾಡುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಂತೆ ಇದೆ ಎಂದು ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರು ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಡಳಿತ ಮಂಡಳಿ ಅಧ್ಯಕ್ಷರಾದ ಕಾಲೇಜಿನ ಪ್ರಿನ್ಸಿಪಾಲ್ […]























































































































































































































































































































































































































































































































































































































































































































































































































































































































































































































































































































































































































































































































































































































































































