ಕೆಎಸ್ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದ ಕಾರು:ಮೂವರಿಗೆ ಗಾಯ

ನಾವುಂದ:ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಅತಿ ವೇಗದಿಂದ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬ್ಯಾರಿಕೇಡ್‍ಗೆ ಗುದ್ದಿ ಕುಂದಾಪುರದಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ನಾವುಂದ-ಬಡಾಕೆರೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.ಬಸ್‍ಗೆ ಡಿಕ್ಕಿ ಹೊಡೆದ ಕಾರು ಡಿವೈಡರ್‍ಗೆ ಬಡಿದು ರಸ್ತೆಗೆ ಅಡ್ಡಲಾಗಿ ನಿಂತ್ತಿದ್ದ ಪರಿಣಾಮ ಕೆಲವು ಹೊತ್ತುಗಳ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕು ಉಂಟಾಯಿತು.ಕಾರು ಜಖಂ ಗೊಂಡಿದ್ದು ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬೈಂದೂರು ಠಾಣೆಯ ಪೆÇಲೀಸರು ಸ್ಥಳಕ್ಕೆ ಆಗಮಿಸಿ […]

ಪುಸ್ತಕ ವಿತರಣಾ ಕಾರ್ಯಕ್ರಮ

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ನೂಜಾಡಿ ಶಾಲೆಯಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷೆ ವೀಣಾರಾಣಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ,ಕಾರ್ಯದರ್ಶಿ ವಿಶ್ವನಾಥ ಗಾಣಿಗ ಉಪಸ್ಥಿತರಿದ್ದರು.ಶಾಲೆಯ ಮುಖ್ಯೋಪಾಧ್ಯಾಯರಾದ ತಿಮ್ಮಪ್ಪ ಶೆಟ್ಟಿ ಸ್ವಾಗತಿಸಿದರು.ಶಿಕ್ಷಕ ಸುದೀಪ್ ಶೆಟ್ಟಿ ನಿರೂಪಿಸಿದರು.ಅದ್ಯಾಪಕಿ ಉಮೈ ಸಲ್ಮಾ ಮತ್ತು ಅತಿಥಿ ಶಿಕ್ಷಕಿಯರು ಸಹಕರಿಸಿದರು.ಉದ್ಯಮಿಗಳಾದ ಮಧುಸೂದನ್ ಶೆಟ್ಟಿ ನೂಜಾಡಿ ಅವರು ಇಪ್ಪತ್ತು ಸಾವಿರ.ರೂ ಮೌಲ್ಯದ ಪುಸ್ತಕವನ್ನು ನೂಜಾಡಿ ಶಾಲೆಗೆ ಕೊಡುಗೆ ಆಗಿ ನೀಡಿದ್ದರು.

ಬಿತ್ತೋತ್ಸವ ಕಾರ್ಯಕ್ರಮ,ಬೀಜದ ಉಂಡೆ ಬಿತ್ತನೆ

ಕುಂದಾಪುರ:ಕರ್ನಾಟಕ ಅರಣ್ಯ ಇಲಾಖೆ,ಮಂಗಳೂರು ವೃತ್ತ,ಕುಂದಾಪುರ ವಿಭಾಗ ಮತ್ತು ಕುಂದಾಪುರ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಆಲೂರು,ಆಶಯ ಇಕೊ ಕ್ಲಬ್,ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬಿತ್ತೋತ್ಸವ ಮತ್ತು ವನಮಹೋತ್ಸವ ಕಾರ್ಯಕ್ರಮ ಆಲೂರು ಪ್ರೌಢ ಶಾಲೆಯಲ್ಲಿ ಮಂಗಳವಾರ ನಡೆಯಿತು.ಆಲೂರು ಗ್ರಾ.ಪಂ ಅಧ್ಯಕ್ಷೆ ಜಯಲಕ್ಷ್ಮೀ,ಉಪಾಧ್ಯಕ್ಷ ರವಿ ಶೆಟ್ಟಿ,ಅರಣ್ಯ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ,ಚಂದ್ರಶೇಖರ ಶೆಟ್ಟಿ,ಅರಣ್ಯಾಧಿಕಾರಿ ದೀಲಿಪ್,ಗ್ರಾ.ಪಂ ಸದಸ್ಯರುಗಳು,ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು,ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದವರು ಉಪಸ್ಥಿತಿದ್ದರು.ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು,ಪರಿಸರದಲ್ಲಿ ಬೀಜದ ಉಂಡೆಗಳನ್ನು ಬಿತ್ತಲಾಯಿತು.

You cannot copy content of this page