ಸುದೇಶ್ ಕುಮಾರ್ ಶೆಟ್ಟಿ ಲೆಕ್ಕಪರಿಶೋಧಕರ ಪರೀಕ್ಷೆಯಲ್ಲಿ ತೇರ್ಗಡೆ

ಕುಂದಾಪುರ:ಸುದೇಶ್ ಕುಮಾರ್ ಶೆಟ್ಟಿ ಅವರು 2024-25ನೇ ಸಾಲಿನ ಐಸಿಎಐ (ಸಿಎ) ಲೆಕ್ಕಪರಿಶೋಧಕರ ಅಂತಿಮ ಹಂತದ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೆ ತೇರ್ಗಡೆ ಹೊಂದಿದ್ದಾರೆ.ಅವರು ದಿ.ಸಂತೋಷ್ ಶಕೀಲಾ ಶೆಟ್ಟಿ ನಾರ್ಕಳಿ ಗುಡಿಮನೆ ದಂಪತಿಗಳ ಪುತ್ರ.

ಕಾರು ಪಿಕಪ್ ಮುಖಾಮುಖಿ ಡಿಕ್ಕಿ:ಇಬ್ಬರಿಗೆ ಗಾಯ

ಕುಂದಾಪುರ:ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ತ್ತಿದ್ದ ಕಾರ್ ರಾಷ್ಟ್ರೀಯ ಹೆದ್ದಾರಿಯ ವಿಭಜಕವನ್ನು ಹಾರಿಸಿಕೊಂಡು ಹೋಗಿ ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಪಿಕಪ್ ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಾಲಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಕುಂಭಾಸಿಯ ಗಾಯತ್ರಿ ಲಾಡ್ಜ್ ಬಳಿ ಭಾನುವಾರ ಸಂಭವಿಸಿದೆ.ಚಾಲಕರಾದ ಗಿರೀಶ್ ಮುಳ್ಳುಗುಡ್ಡೆ ಕುಂದಾಪುರ (23) ಹಾಗೂ ರಘುವೀರ್ ಶೆಟ್ಟಿ ಕುಂದಾಪುರ (52) ಇವರಿಗೆ ಗಂಭೀರ ಗಾಯಗಳಾಗಿದ್ದು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ.ಸ್ಥಳಕ್ಕೆ ಕುಂದಾಪುರ ಸಂಚಾರಿ ಠಾಣಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ […]

ನಾಡದೋಣಿ ಮೀನುಗಾರರಿಂದ ರಾಷ್ಟ್ರೀಯ ಹೆದ್ದಾರಿ ತಡೆ

ಕುಂದಾಪುರ:ಬುಲ್ಟ್ರೋಲ್ ಮತ್ತು ಲೈಟ್ ಫಿಶಿಂಗ್ ಮೀನುಗಾರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆಯನ್ನು ತ್ರಾಸಿಯಲ್ಲಿ ಶುಕ್ರವಾರ ಮಾಡಲಾಯಿತು.ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ ಮಾತನಾಡಿ,12 ರಿಂದ 240 ನಾಟಿಕಲ್ ದೂರದ ತನಕ ಅವೈಜ್ಞಾನಿಕ ಮೀನುಗಾರಿಕೆಯನ್ನು ಕೇಂದ್ರ ಸರಕಾರ ನಿಷೇಧ ಮಾಡಿದೆ.ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದರು ರಾಜ್ಯದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ಇನ್ನೂ ನಿಷೇಧಗೊಂಡಿಲ್ಲ.ಸಾಂಪ್ರದಾಯಿಕ ಮೀನುಗಾರರ ಜೀವನದ ದೃಷ್ಟಿಯಿಂದ ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಸರಕಾರ ಕೂಡಲೇ ಕಠಿಣ […]

You cannot copy content of this page