ಜೀವಂತ ಹಾವುಗಳೊಂದಿಗೆ ನಾಗರ ಪಂಚಮಿ ಆಚರಣೆ

ಉಡುಪಿ:ಉರಗ ಚಿಕಿತ್ಸಕರು ಹಾಗೂ ರಕ್ಷಕರಾದ ಮಜೂರು ಗೊವರ್ಧನ ಭಟ್ ಪ್ರತೀ ವರ್ಷದಂತೆ ಈ ಬಾರಿಯೂ ನಾಗರ ಪಂಚಮಿಯಂದು ಎರಡು ಜೀವಂತ ನಾಗರಹಾವುಗಳಿಗೆ ಜಲಾಭಿಷೇಕ ಮಾಡುವುದರೊಂದಿಗೆ ತನು ಹೊಯ್ದು ಆರತಿ ಎತ್ತಿ ಪೂಜೆ ಸಲ್ಲಿಸಿದ್ದಾರೆ. ಉರಗ ತಜ್ಞರಾಗಿರುವ ಗೋವರ್ಧನ್ ಭಟ್ ಗಾಯಗೊಂಡ ಹಾವುಗಳನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವ ಹವ್ಯಾಸ  ಹೊಂದಿದ್ದಾರೆ.ಕೆಲ ದಿನಗಳ ಹಿಂದೆ ರಿಕ್ಷಾದ ಅಡಿಗೆ ಬಿದ್ದಿದ್ದ ಒಂದು ಹಾವು ಮತ್ತು ನಾಯಿ ಕಚ್ಚಿ ಗಾಯಗೊಳಿಸಿದ್ದ ಇನ್ನೊಂದು ಹಾವು ಸಹಿತ ಎರಡು ಹಾವುಗಳನ್ನು ತಮ್ಮ‌ಮನೆಯಲ್ಲಿಟ್ಟು ಶುಶ್ರೂಷೆ ನೀಡುತ್ತಿದ್ದು ಆ […]

ಶ್ರೀನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನ ಶ್ರೀಕ್ಷೇತ್ರ ಹಣಿನಮಕ್ಕಿ

ಕುಂದಾಪುರ:ಹೊಸಾಡು ಗ್ರಾಮದ ಅರಾಟೆ ಶ್ರೀನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಹಣಿನಮಕ್ಕಿಯಲ್ಲಿ ನಾಗರ ಪಂಚಮಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾಭಿಷೇಕ,ಹಣ್ಣುಕಾಯಿ,ಮಂಗಳಾರತಿ ಸೇವೆ ಹಾಗೂ ಪ್ರಸಾದ ವಿತರಣಾ ಕಾರ್ಯಕ್ರಮ ಜರುಗಿರತು.

ಶ್ರೀಕ್ಷೇತ್ರ ಶ್ರೀ ಗುಡ್ಡಮ್ಮಾಡಿ ದೇವಸ್ಥಾನ

ಕುಂದಾಪುರ:ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ಜರುಗಿತು.ನಾಗರ ಪಂಚಮಿ ಹಬ್ಬದ ಪ್ರಯುಕ್ತ ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸೀಯಾಳಭಿಷೇಕ, ತನು ಸೇವೆ,ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ ಹಾಗೂ ಹುಗ್ಗಿ ಸೇವೆ ನಡೆಯಿತು.ನೂರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

You cannot copy content of this page