ಹೆಮ್ಮಾಡಿ ಪಂಚಾಯತಿನ ಅಧ್ಯಕ್ಷರಾಗಿ ನೇತ್ರಾವತಿ ಆಯ್ಕೆ

ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ನೇತ್ರಾವತಿ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಡಿ ಕಾಂಚನ್ ಆಯ್ಕೆಯಾಗಿದ್ದಾರೆ.11 ಪಂಚಾಯತ್ ಸದಸ್ಯರೊಳಗೊಂಡ ಹೆಮ್ಮಾಡಿ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತ 08 ಸದಸ್ಯರು ಹಾಗೂ ಬಿಜೆಪಿ ಬೆಂಬಲಿತ 03 ಸದಸ್ಯರಿದ್ದಾರೆ ನಿರೀಕ್ಷೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಪಕ್ಷದ ಸದಸ್ಯರ ಪಾಲಾಗಿದೆ.

ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಒಲಿದ ಅಧ್ಯಕ್ಷ ಸ್ಥಾನ

ಬೈಂದೂರು:ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತಿನ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಹಾಲಿ ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುಶೀಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.ಬಿಜೆಪಿ ಪಕ್ಷದ ಬೆಂಬಲಿತ 11 ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ 02 ಸದಸ್ಯರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ 01 ಸದಸ್ಯರೊಳಗೊಂಡ ಮರವಂತೆ ಪಂಚಾಯತ್‍ನಲ್ಲಿ ಒಟ್ಟು 14 ಗ್ರಾಮ ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯ ನಾಗರಾಜ ಪಠಗಾರ […]

ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯ ಉದ್ಘಾಟನೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ಕಾತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತನ ನೂತನ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಉದ್ಘಾಟಿಸಿದರು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ,ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ,ಉಪ ವಿಭಾಗಧಿಕಾರಿ ರಶ್ಮಿ,ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ, ಗ್ರಾಮಸ್ಥರು ಉಪಸ್ಥಿತರಿದ್ದರು.

You cannot copy content of this page