ಆಗಸ್ಟ್ 21.ರಂದು ಶ್ರೀ ನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ
ಕುಂದಾಪುರ:ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ ಶ್ರೀ ನಾಗಕನಿಕಾ ಪರಮೇಶ್ವರಿ ದೇವಸ್ಥಾನ ಹಣಿಮಕ್ಕಿಯಲ್ಲಿ ಆಗಸ್ಟ್ 21 ರಂದು ಸೋಮವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಹಬ್ಬ ಜರುಗಲಿದೆ.ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾಭಿಷೇಕ,ಮಂಗಳಾರತಿ ಹಾಗೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆ ತನಕ ಪ್ರಸಾದ ವಿತರಣೆ ನಡೆಯಲಿದೆ.ದೇವಸ್ಥಾನದಲ್ಲಿ ನಡೆಯಲಿರುವ ದೇವತಾ ಕಾರ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಳದವರು ಕೇಳಿಕೊಂಡಿದ್ದಾರೆ. (ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ […]























































































































































































































































































































































































































































































































































































































































































































































































































































































































































































































































































































































































































































































































































































































































































