ಇಂಗು ಗುಂಡಿಗೆ ಬಿದ್ದು ಬಾಲಕ ಮೃತ್ಯು

ಮೂಡಿಗೆರೆ:ಆಟ ಆಡುತ್ತಿದ್ದಾಗ ಆಕಸ್ಮಿಕವಾಗಿ ಇಂಗು ಗುಂಡಿಗೆ ಬಿದ್ದು ಅಶರ್ ಡಿ ಗುನ್ನಾ (8) ಎನ್ನುವ ಬಾಲಕನೊರ್ವ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಎಂಬಲ್ಲಿ ನಡೆದಿದೆ.ಹೊಸದಾಗಿ ನಿರ್ಮಾಣವಾಗುತ್ತಿದ್ದ ಶಾಲೆಯೊಂದರ ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ಬಳಸಿಕೊಳ್ಳುತ್ತಿರುವ ಇಂಗು ಗುಂಡಿಗೆ ಬಾಲಕನು ಬಿದ್ದು ಈ ದುರ್ಘಟನೆ ಸಂಭವಿಸಿದೆ.ತೆರೆದ ಜಾಗದಲ್ಲಿ ಇಂಗು ಗುಂಡಿ ತೆಗೆದು ರಕ್ಷಣಾಬೇಲಿ ನಿರ್ಮಿಸದೆ ಇದ್ದಿದ್ದರಿಂದ ಇವೊಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಕುಂದಾಪುರ:ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರು-ಶಿಕ್ಷಕರ ಸಭೆ ನಡೆಯಿತು.ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಮಾತನಾಡಿ,ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಬದಲಾದ ಪರೀಕ್ಷಾ ಪದ್ದತಿ ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಕುರಿತು ವಿವರಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಡುಪಿ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ,ಸ್ಪರ್ಧಾತ್ಮಕ ಯುಗದಲ್ಲಿ ಸಿ.ಎ/ಸಿ.ಎಸ್ ನಂತಹ ಕೋರ್ಸ್‍ಗಳು ಬಹಳಷ್ಟು […]

ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಬೈಕ್ ಅಪಘಾತ,ಮೂವರಿಗೆ ಗಾಯ

ಕುಂದಾಪುರ:ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಬೈಕ್‍ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸಾವರರಿಬ್ಬರಿಗೂ ಗಾಯವಾಗಿದೆ.ಸಹ ಸವಾರ ಸುರೇಶ್ ಜೋಗಿ ಬೈಂದೂರು ಎನ್ನುವ ವ್ಯಕ್ತಿಯೊಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಭಾನುವಾರ ನಡೆದಿದೆ.ಇಬ್ರಾಹಿಂ ಗಂಗೊಳ್ಳಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.ಅವೈಜ್ಞಾನಿಕತೆಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್ ಅನ್ನು ಸರಿ ಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. (ಮುಳ್ಳಿಕಟ್ಟೆ ಸರ್ಕಲ್ ನಲ್ಲಿ […]

You cannot copy content of this page