ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ

ಬೈಂದೂರು:ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಜರುಗಿತು.ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು ಮತ್ತು ಶ್ರೀ ನರಸಿಂಹ ದೇವರಿಗೆ ವಿಶೇಷ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ನಡೆಯಿತು.ಬೆಳೆಗೆ ಶ್ರೇಯಸ್ಸು ಆಗಲಿ ಎಂದು ರೈತಾಪಿ ಜನರು ಮಳೆ ದೇವರಾದ ಶ್ರೀವರಾಹ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ನವ ಜೋಡಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ದೇವಳದ ವ್ಯವಸ್ಥಾಪನಾ ಸಮಿತಿ […]

ಹೆಮ್ಮಾಡಿ ಪಂಚಾಯತಿನ ಅಧ್ಯಕ್ಷರಾಗಿ ನೇತ್ರಾವತಿ ಆಯ್ಕೆ

ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ನೇತ್ರಾವತಿ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಡಿ ಕಾಂಚನ್ ಆಯ್ಕೆಯಾಗಿದ್ದಾರೆ.11 ಪಂಚಾಯತ್ ಸದಸ್ಯರೊಳಗೊಂಡ ಹೆಮ್ಮಾಡಿ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತ 08 ಸದಸ್ಯರು ಹಾಗೂ ಬಿಜೆಪಿ ಬೆಂಬಲಿತ 03 ಸದಸ್ಯರಿದ್ದಾರೆ ನಿರೀಕ್ಷೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಪಕ್ಷದ ಸದಸ್ಯರ ಪಾಲಾಗಿದೆ.

ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಒಲಿದ ಅಧ್ಯಕ್ಷ ಸ್ಥಾನ

ಬೈಂದೂರು:ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತಿನ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಹಾಲಿ ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುಶೀಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.ಬಿಜೆಪಿ ಪಕ್ಷದ ಬೆಂಬಲಿತ 11 ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ 02 ಸದಸ್ಯರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ 01 ಸದಸ್ಯರೊಳಗೊಂಡ ಮರವಂತೆ ಪಂಚಾಯತ್‍ನಲ್ಲಿ ಒಟ್ಟು 14 ಗ್ರಾಮ ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯ ನಾಗರಾಜ ಪಠಗಾರ […]

You cannot copy content of this page