ಬಿಜೆಪಿಯಲ್ಲಿ ನಳಿನ್ ಕುಮಾರ್ ಕಟೀಲ್ ತಲೆ ದಂಡ ನಿಶ್ಚಿತ-ಸಮರ್ಥ ನಾಯಕನಿಗಾಗಿ ತಲಾಶ್
ಬೆಂಗಳೂರು :ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೀಡಾಗಿರುವ ಬಿಜೆಪಿ ಈಗ ಲೋಕಸಭೆ ಚುನಾವಣೆಗಾಗುವಾಗ ಪಕ್ಷದ ವರ್ಚಸ್ಸನ್ನು ಮೇಲೆತ್ತಬಲ್ಲ ರಾಜ್ಯಾಧ್ಯಕ್ಷನನ್ನು ಹುಡುಕುತ್ತಿದೆ. ಜುಲೈ 3ರಂದು ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು,ಅದಕ್ಕೂ ಮೊದಲು ರಾಜ್ಯಾಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯಲ್ಲಿ ಪ್ರಕ್ರಿಯೆ ಶುರುವಾಗಿದೆ. ಸದ್ಯಕ್ಕೆ ರಾಜ್ಯಾಧ್ಯಕ್ಷರಾಗಿರುವ ನಳಿನ್ಕುಮಾರ್ ಕಟೀಲು ಅವರ ಅವಧಿ ಮುಗಿದಿದ್ದು ಮತ್ತೆ ಅವರನ್ನೇ ಮುಂದುವರಿಸುವ ಉದ್ದೇಶ ಬಿಜೆಪಿ ಹೈಕಮಾಂಡ್ಗೆ ಇಲ್ಲ. ಸ್ವತಹ ನಳಿನ್ಕುಮಾರ್ ಕಟೀಲು ಜವಾಬ್ದಾರಿಯಿಂದ ಕಳಚಿಕೊಳ್ಳಲು ರೆಡಿಯಾಗಿದ್ದಾರೆ.ಅರುವತ್ತೈದು ಸ್ಥಾನಕ್ಕೆ ಕುಸಿದಿರುವ ಬಿಜೆಪಿ ಚುನಾವಣೆ […]