ವಿದ್ಯಾರ್ಥಿಗಳಿಗೆ ಶಬ್ದಕೋಶ ಪುಸ್ತಕ ವಿತರಣೆ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ 6,7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಿವೃತ್ತ ಅಧ್ಯಾಪಕರಾದ ಸಂಪತ್ ಕುಮಾರ್ ಪಾಂಗಾಳ ಅವರು ಅತ್ಯುತ್ತಮ ಗುಣಮಟ್ಟದ ಶಬ್ದಕೋಶ ಪುಸ್ತಕವನ್ನು ಉಚಿತವಾಗಿ ನೀಡಿ ಶುಭಹಾರೈಸಿದರು.ದೈಹಿಕ ಶಿಕ್ಷಣ ಪರಿವಿಕ್ಷಣಾಕಾರಿ ಚಂದ್ರಶೇಖರ ಶೆಟ್ಟಿ,ಮುಖ್ಯೋಪಾಧ್ಯಾಯರಾದ ರಾಜೇಶ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.

ಹೊಲಿಗೆ ಯಂತ್ರ ವಿತರಣೆ

ಕುಂದಾಪುರ:ರೋಟರಿ ಕ್ಲಬ್ ಗಂಗೊಳ್ಳಿ,ರೋಟರಿ ಫೌಂಡೇಶನ್ ಡಿಸ್ಟ್ರಿಕ್ಟ್‍ಗ್ರ್ಯಾಂಟ್ ಡಿಜಿ2345169 ವತಿಯಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಕೋರ್ಡಿನೇಟರ್ ಉಮೇಶ್ ಮೇಸ್ತ,ಟಿಆರ್‍ಪಿ ಛೇರ್ಮನ್ ಗಣೇಶ್ ಕಾಮತ್,ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್.ಕೆ,ಕಾರ್ಯದರ್ಶಿ ಚಂದ್ರಕಲಾ,ರಮಾನಾಥ ನಾಯಕ್,ಯೌತ್ ಸರ್ವಿಸ್ ಛೇರ್ಮನ್ ನಾಗೇಂದ್ರ ಪೈ ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷ ಅಪಪ್ರಚಾರ,ಸುಳ್ಳು ಭರವಸೆಯಿಂದ ಅಧಿಕಾರಕ್ಕೆ ಬಂದಿದೆ-ಸಂಸದ ರಾಘವೇಂದ್ರ

ಕುಂದಾಪುರ:ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರ 9 ವರ್ಷ ಪೂರೈಸಿದೆ.ಪ್ರಧಾನಿ ಹಾಗೂ ಹಿಂದಿನ ನಮ್ಮ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ.ಕಾಂಗ್ರೆಸ್ಸಿನ ಅಪಪ್ರಚಾರ,ಸುಳ್ಳು ಭರವಸೆಯಿಂದ ಅಧಿಕಾರಕ್ಕೆ ಬಂದಿರಬಹುದು.ಗ್ಯಾರಂಟಿಗಳನ್ನು ಜಾರಿಗೆ ತರಲು ನಾವು ಹಕ್ಕೊತ್ತಾಯ ಮಾಡುತ್ತೇವೆ.ಖಾಸಗಿ ಬಸ್‍ಗಳಿಗೂ ಸಬ್ಸಿಡಿ ನೀಡುವ ಮೂಲಕ ಅದರಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು.ಇದಕ್ಕಾಗಿ ರಾಜ್ಯವ್ಯಾಪಿ ಬಿಜೆಪಿಯಿಂದ ಜನಾಂದೋಲನ ನಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಹೆಮ್ಮಾಡಿಯ ಜಯಶ್ರೀ ಹಾಲ್‍ನಲ್ಲಿ ಶುಕ್ರವಾರ ನಡೆದ ಬಿಜೆಪಿ ಹಿರಿಯ ಕಾರ್ಯಕರ್ತರ […]

You cannot copy content of this page